ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲದ ಬನಾರಿ ಬಾಬುಕಟ್ಟೆಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಆರು ಮಂದಿಗೆ ಗಾಯ

Last Updated 20 ಸೆಪ್ಟೆಂಬರ್ 2020, 5:39 IST
ಅಕ್ಷರ ಗಾತ್ರ

ವಿಟ್ಲ (ದಕ್ಷಿಣ ಕನ್ನಡ): ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ‌.

ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆಯ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಷೇದದಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT