‘ಕನ್ನಡ ಶಾಲೆಗಳು ಉಳಿದರೆ ಕನ್ನಡ ಉಳಿಯುತ್ತದೆ. ಕನ್ನಡ ಮಾಧ್ಯಮ ಉಳಿವಿಗೆ ಪರಿಷತ್ತು ಹೋರಾಡುತ್ತಲೇ ಬಂದಿದೆ. ಇತ್ತೀಚಿಗೆ ಕನ್ನಡ ಶಾಲೆಗಳ ಉಳಿವಿಗಾಗಿ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆ ನಡೆಸಿ, ಕನ್ನಡ ಶಾಲೆಗಳ ಉಳಿವಿಗಾಗಿ ಸರ್ಕಾರ ಹಾಗೂ ಸಾರ್ವಜನಿಕರು ಏನೆಲ್ಲಾ ಮಾಡಬೇಕು ಎನ್ನುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸಮ್ಮುಖದಲ್ಲಿ ಚರ್ಚೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.