<p><strong>ಮಂಗಳೂರು</strong>: ನಗರದ ಕದ್ರಿಯಲ್ಲಿರುವ ಸರ್ಕಿಟ್ ಹೌಸ್ನಿಂದ ಕೆಳಗಡೆ ಹೋಗುವ ರಸ್ತೆ ಬದಿಯಲ್ಲಿನ ಅಪಾರ್ಟ್ಮೆಂಟ್ವೊಂದರ ಕಾಂಪೌಂಡ್ ಮೇಲೆ ‘ಲಷ್ಕರ್ ಜಿಂದಾಬಾದ್’ ಎಂಬಿತ್ಯಾದಿ ಬರಹವನ್ನು ಬರೆದಿರುವುದು ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.</p>.<p>‘ಲಷ್ಕರ್ ಜಿಂದಾಬಾದ್’ ಎಂದು ಹ್ಯಾಷ್ಟ್ಯಾಗ್ ಹಾಕಿ, ‘ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ಲಷ್ಕರ್–ಇ–ತೊಯಿಬಾ ಟು ಡೀಲ್ ವಿತ್ ಸಂಘೀಸ್ ಆ್ಯಂಡ್ ಮನುವಾದಿಸ್’ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ಗೋಡೆ ಬರಹವನ್ನು ಅಳಿಸಿದ್ದಾರೆ.</p>.<p>ಕೋಮು ಸಾಮರಸ್ಯ ಕದಡುವ ಉದ್ದೇಶದಿಂದ ಈ ಕೃತ್ಯ ಕೈಗೊಂಡಿದ್ದು, ಮಧ್ಯರಾತ್ರಿ ಬರೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ರಸ್ತೆಯ ಸುತ್ತಮುತ್ತ ಸಿ.ಸಿ ಟಿವಿ ಕ್ಯಾಮೆರಾಗಳಿದ್ದು, ಅವುಗಳಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>‘ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.</p>.<p><strong>ಖಂಡನೆ:</strong> ಘಟನೆಯನ್ನು ಖಂಡಿಸಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿವೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಸೇರಿದಂತೆ ಡಿವೈಎಫ್ಐ, ಪಿಎಫ್ಐ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.</p>.<p><strong>‘ಉತ್ತರ ಇದು’ ಪೋಸ್ಟ್ ವೈರಲ್:</strong> ಈ ಗೋಡೆ ಬರಹ ಕಂಡು ಬಂದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಉತ್ತರ ಇದು’ ಎಂಬ ಪೋಸ್ಟ್ ವೈರಲ್ ಆಗಿದೆ. ಗೋಡೆ ಬರಹದ ಫೋಟೊ ಎಡಿಟ್ ಮಾಡಿ, ‘ಉತ್ತರ ಇದು’ ಎಂದು ಸೇರಿಸಲಾಗಿದೆ.</p>.<p>‘ಆರ್ಎಸ್ಎಸ್’ ಹೆಸರಿನಲ್ಲಿ ಈ ಪೋಸ್ಟ್ ಎಂದು ಬರೆಯಲಾಗಿದ್ದು, ‘ಇನ್ವೈಟ್ ಯಾರನ್ನು ಬೇಕಾದರೂ ಮಾಡಿ, ನಾವೇನು ಅಂಗನವಾಡಿ ಸಜ್ಜಿಗೆ ತಿನ್ನುತ್ತಾ ಕುಳಿತುಕೊಳ್ಳುತ್ತೇವಾ. ಇದು ಮೋದಿಫೈಡ್ ಇಂಡಿಯಾ’ ಎಂದು ಪೋಸ್ಟ್ ಮಾಡಲಾಗಿದೆ. ಹ್ಯಾಷ್ ಟ್ಯಾಗ್ನಲ್ಲಿ ‘ಆರ್ಎಸ್ಎಸ್’ ಮತ್ತು ‘ಇಂಡಿಯನ್ ಆರ್ಮಿ’ ಎಂದು ಬರೆಯಲಾಗಿದೆ.</p>.<p>*</p>.<p>ಲಷ್ಕರ್ ಉಗ್ರ ಸಂಘಟನೆ ಪರವಾಗಿ ಬರೆದಿರುವ ಗೋಡೆ ಬರಹ ಕಾಶ್ಮೀರ ಅಥವಾ ಪಾಕಿಸ್ತಾನದ ಉಗ್ರರು ಮಂಗಳೂರಿನವರೆಗೆ ಬಂದಿದ್ದಾರೆ ಎಂಬುದನ್ನು ತೋರಿಸುತ್ತದೆ.<br /><em><strong>-ಶೋಭಾ ಕರಂದ್ಲಾಜೆ, ಸಂಸದೆ</strong></em></p>.<p><em><strong>*</strong></em></p>.<p>ಲಷ್ಕರ್ ಪರವಾಗಿ ರಾಷ್ಟ್ರವಿರೋಧಿ ಬರಹ ಬರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.<br /><em><strong>-ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ಕದ್ರಿಯಲ್ಲಿರುವ ಸರ್ಕಿಟ್ ಹೌಸ್ನಿಂದ ಕೆಳಗಡೆ ಹೋಗುವ ರಸ್ತೆ ಬದಿಯಲ್ಲಿನ ಅಪಾರ್ಟ್ಮೆಂಟ್ವೊಂದರ ಕಾಂಪೌಂಡ್ ಮೇಲೆ ‘ಲಷ್ಕರ್ ಜಿಂದಾಬಾದ್’ ಎಂಬಿತ್ಯಾದಿ ಬರಹವನ್ನು ಬರೆದಿರುವುದು ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.</p>.<p>‘ಲಷ್ಕರ್ ಜಿಂದಾಬಾದ್’ ಎಂದು ಹ್ಯಾಷ್ಟ್ಯಾಗ್ ಹಾಕಿ, ‘ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ಲಷ್ಕರ್–ಇ–ತೊಯಿಬಾ ಟು ಡೀಲ್ ವಿತ್ ಸಂಘೀಸ್ ಆ್ಯಂಡ್ ಮನುವಾದಿಸ್’ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ಗೋಡೆ ಬರಹವನ್ನು ಅಳಿಸಿದ್ದಾರೆ.</p>.<p>ಕೋಮು ಸಾಮರಸ್ಯ ಕದಡುವ ಉದ್ದೇಶದಿಂದ ಈ ಕೃತ್ಯ ಕೈಗೊಂಡಿದ್ದು, ಮಧ್ಯರಾತ್ರಿ ಬರೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ರಸ್ತೆಯ ಸುತ್ತಮುತ್ತ ಸಿ.ಸಿ ಟಿವಿ ಕ್ಯಾಮೆರಾಗಳಿದ್ದು, ಅವುಗಳಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>‘ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.</p>.<p><strong>ಖಂಡನೆ:</strong> ಘಟನೆಯನ್ನು ಖಂಡಿಸಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿವೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಸೇರಿದಂತೆ ಡಿವೈಎಫ್ಐ, ಪಿಎಫ್ಐ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.</p>.<p><strong>‘ಉತ್ತರ ಇದು’ ಪೋಸ್ಟ್ ವೈರಲ್:</strong> ಈ ಗೋಡೆ ಬರಹ ಕಂಡು ಬಂದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಉತ್ತರ ಇದು’ ಎಂಬ ಪೋಸ್ಟ್ ವೈರಲ್ ಆಗಿದೆ. ಗೋಡೆ ಬರಹದ ಫೋಟೊ ಎಡಿಟ್ ಮಾಡಿ, ‘ಉತ್ತರ ಇದು’ ಎಂದು ಸೇರಿಸಲಾಗಿದೆ.</p>.<p>‘ಆರ್ಎಸ್ಎಸ್’ ಹೆಸರಿನಲ್ಲಿ ಈ ಪೋಸ್ಟ್ ಎಂದು ಬರೆಯಲಾಗಿದ್ದು, ‘ಇನ್ವೈಟ್ ಯಾರನ್ನು ಬೇಕಾದರೂ ಮಾಡಿ, ನಾವೇನು ಅಂಗನವಾಡಿ ಸಜ್ಜಿಗೆ ತಿನ್ನುತ್ತಾ ಕುಳಿತುಕೊಳ್ಳುತ್ತೇವಾ. ಇದು ಮೋದಿಫೈಡ್ ಇಂಡಿಯಾ’ ಎಂದು ಪೋಸ್ಟ್ ಮಾಡಲಾಗಿದೆ. ಹ್ಯಾಷ್ ಟ್ಯಾಗ್ನಲ್ಲಿ ‘ಆರ್ಎಸ್ಎಸ್’ ಮತ್ತು ‘ಇಂಡಿಯನ್ ಆರ್ಮಿ’ ಎಂದು ಬರೆಯಲಾಗಿದೆ.</p>.<p>*</p>.<p>ಲಷ್ಕರ್ ಉಗ್ರ ಸಂಘಟನೆ ಪರವಾಗಿ ಬರೆದಿರುವ ಗೋಡೆ ಬರಹ ಕಾಶ್ಮೀರ ಅಥವಾ ಪಾಕಿಸ್ತಾನದ ಉಗ್ರರು ಮಂಗಳೂರಿನವರೆಗೆ ಬಂದಿದ್ದಾರೆ ಎಂಬುದನ್ನು ತೋರಿಸುತ್ತದೆ.<br /><em><strong>-ಶೋಭಾ ಕರಂದ್ಲಾಜೆ, ಸಂಸದೆ</strong></em></p>.<p><em><strong>*</strong></em></p>.<p>ಲಷ್ಕರ್ ಪರವಾಗಿ ರಾಷ್ಟ್ರವಿರೋಧಿ ಬರಹ ಬರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.<br /><em><strong>-ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>