‘ಕರ್ನಾಟಕದಲ್ಲಿರುವ ಕಾನೂನು ಕಾಲೇಜುಗಳಲ್ಲಿ ತಮಿಳುನಾಡು, ಕೇರಳ ಹಾಗೂ ಇನ್ನಿತರ ರಾಜ್ಯಗಳ ವಿದ್ಯಾರ್ಥಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪರೀಕ್ಷೆಯ ವೇಳೆ ತಮ್ಮ ಊರುಗಳಿಂದ ನಗರಕ್ಕೆ ಬರುತ್ತಾರೆ. ಹೋಟೆಲ್ ಹಾಗೂ ಲಾಡ್ಜ್ಗಳಲ್ಲಿ ವಾಸವಿರುತ್ತಾರೆ. ಇವರು ಪರೀಕ್ಷೆಗೆ ಹಾಜರಾದರೆ ಎಲ್ಲಿ ಕೊರೊನಾ ಹರಡುವುದೊ ಎಂಬ ಭಯ ಎಲ್ಲರಲ್ಲೂ ಆವರಿಸಿದೆ. ಕಾನೂನು ಕಾಲೇಜಿನ ಸಿಬ್ಬಂದಿ ಕೂಡ ಆತಂಕದಲ್ಲೇ ಪರೀಕ್ಷೆಗಳನ್ನು ನಡೆಸುವ ಅನಿವಾರ್ಯತೆಗೆ ಸಿಲುಕಿದ್ದಾರೆ’ ಎಂದು ಅವರು ಹೇಳಿದ್ದಾರೆ.