‘ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಬ್ಇನ್ಸ್ಪೆಕ್ಟರ್ ಕೆ.ಪಿ. ಸುತೇಶ್ ನನ್ನ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಪ್ರಕರಣ ಕುರಿತು ಇಲಾಖಾ ವಿಚಾರಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ನನಗೆ ಪರಿಹಾರ ನೀಡಲು ಆದೇಶಿಸಬೇಕು’ ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುತ್ತಿಲ ಗ್ರಾಮದ ವಕೀಲ ಕುಲದೀಪ್ ಹೈಕೋರ್ಟ್ ಮೆಟ್ಟಿಲೇರಿದ್ದರು.