12ನೇ ಶತಮಾನದಲ್ಲಿಯೇ ಬಸವಾದಿ ಶರಣರು ಕಾಯಕ, ದಾಸೋಹ ತತ್ವವನ್ನು ಪ್ರತಿಪಾದನೆ ಮಾಡಿದ್ದರು. ಎಲ್ಲರೂ ದುಡಿಯಬೇಕು, ಎಲ್ಲರೂ ಉಣ್ಣಬೇಕು ಎಂಬುದು ಇದರ ಆಶಯ. ಅವರ ಈ ತತ್ವಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಿದ್ದರೆ ಇಂದು ಸಾಮಾಜಿಕ ಅಂತರ ಕಣ್ಮರೆಯಾಗಿ, ಸಮಸಮಾಜ ಸ್ಥಾಪನೆಯಾಗಿರುತ್ತಿತ್ತು. 2/6#Gandhibhavana
— Siddaramaiah (@siddaramaiah) September 13, 2020
ಕೃಷಿಯನ್ನು ಹೊರತುಪಡಿಸಿ ಇತರೆ ಎಲ್ಲಾ ಉತ್ಪಾದನಾ ವಲಯಗಳಲ್ಲೂ ಬೆಲೆ ನಿಗದಿ ಮಾಡುವ ಹಕ್ಕು ಉತ್ಪಾದಕರಿಗೇ ಇದೆ. ಆದರೆ ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡುವವರು ಕೊಳ್ಳುವವರಾಗಿದ್ದಾರೆ. ಇದರಿಂದ ರೈತಾಪಿ ವರ್ಗ ನಿರಂತರ ಅರ್ಥಿಕ ಶೋಷಣೆ ಎದುರಿಸುವಂತಾಗಿದೆ. ಭವಿಷ್ಯದಲ್ಲಿ ಈ ವ್ಯವಸ್ಥೆಯೂ ಬದಲಾಗಬೇಕು. 3/6#Gandhibhavana
— Siddaramaiah (@siddaramaiah) September 13, 2020
ದಶಕಗಳ ಹಿಂದಿದ್ದ ಅವಿಭಜಿತ ಕುಟುಂಬಗಳೆಲ್ಲಾ ಕಾಲಕ್ರಮೇಣ ವಿಭಜನೆಯಾಗುತ್ತಾ, ಇಂದು ಸಮಾಜದಲ್ಲಿ ಕೂಡು ಕುಟುಂಬಗಳು ಕಣ್ಮರೆಯಾಗುತ್ತಿವೆ. ಇದರಿಂದ ಬೃಹತ್ ಹಿಡುವಳಿಗಳು ಕುಟುಂಬಗಳ ನಡುವೆ ಹರಿದು ಹಂಚಿಹೋಗಿ ಕೃಷಿ ಕ್ಷೇತ್ರ ಬಡವಾಗುವ ಜೊತೆಗೆ ರೈತರೂ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. 4/6#Gandhibhavana
— Siddaramaiah (@siddaramaiah) September 13, 2020
ನಾಡಿನ ರೈತರು ಬರಗಾಲ, ಪ್ರವಾಹ, ಕೊರೊನಾ ಹಾವಳಿಗಳಿಂದಾಗಿ ಈಗಾಗಲೇ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ, ಇಂತಹ ಸಂಕಷ್ಟದ ಸಮಯದಲ್ಲಿ ಅವರ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ಭೂಸುಧಾರಣಾ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತರ ಬೆನ್ನುಮೂಳೆಯನ್ನೇ ಮುರಿಯಲು ಹೊರಟಿದೆ. 5/6#Gandhibhavana
— Siddaramaiah (@siddaramaiah) September 13, 2020
ರಾಜ್ಯ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಸದನದಲ್ಲಿ ಸುಧೀರ್ಘ ಚರ್ಚೆ ನಡೆಸಿ, ಅವುಗಳ ಸಾಧಕ- ಬಾಧಕಗಳನ್ನು ರಾಜ್ಯದ ಜನರ ಮುಂದೆ ಇಡಬೇಕು ಎಂಬುದು ನಮ್ಮ ಆಶಯ. ಆದರೆ ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಅಗತ್ಯ ಸಮಯ ಸಿಗುವುದೇ ಅನುಮಾನವೆಂಬಂತಿದೆ. 6/6#Gandhibhavana
— Siddaramaiah (@siddaramaiah) September 13, 2020
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.