<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕೋವಿಡ್ನಿಂದ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ನಮ್ಮ ಪಕ್ಷದ (ಕಾಂಗ್ರೆಸ್) ಸರ್ಕಾರ ಇದ್ದಿದ್ದರೆ ಬಡವರಿಗೆ 10 ಕಿಲೋ ಅಕ್ಕಿ ಮತ್ತು ₹ 10 ಸಾವಿರ ಪರಿಹಾರ ಕೊಡುತ್ತಿದ್ದೆವು. ಬಡವರಿಗೆ ನೆರವು ನೀಡಿದರೆ ಇವರ ಮನೆಯ ಗಂಟು ಹೋಗುತ್ತದೆಯೇ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದರು.</p>.<p>ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಕೊರೊನಾ ಯೋಧರು, ಪೌರ ಕಾರ್ಮಿಕ<br />ರಿಗೆ ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ ಆಯೋಜಿಸಿದ್ದ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಪ್ಯಾಕೇಜ್ನಲ್ಲಿ ಕೆಲವರಿಗೆ ಪುಡಿಗಾಸು ಘೋಷಿಸಿದೆ. ಅದು ಯಾರಿಗೆ ಸಿಗುವುದೊ ಯಾರಿಗೆ ಸಿಗುವುದಿಲ್ಲವೊ ಗೊತ್ತಿಲ್ಲ. ಈ ಹಿಂದೆ ಘೋಷಿಸಿದ ಪ್ಯಾಕೇಜ್ನಿಂದಲೂ ಯಾರಿಗೂ ಅನುಕೂಲ ಆಗಲಿಲ್ಲ. ಕೋವಿಡ್ನಿಂದ ಬಿಪಿಎಲ್ ಕುಟುಂಬದ ವ್ಯಕ್ತಿ ಮೃತರಾದರೆ, ಆ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಅದನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು. ಆಸ್ಪತ್ರೆಯಲ್ಲಿ ಒಬ್ಬರಿಗೆ ಮಾತ್ರ ಹಣ ಪಡೆಯುತ್ತಾರೆಯೇ’ ಎಂದು ಪ್ರಶ್ನಿಸಿದ ಅವರು, ‘ಕೋವಿಡ್ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ನವರು 25 ಸಾವಿರ ಇರಬಹುದು. ಅಷ್ಟೂ ಮಂದಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನ ತಮ್ಮ ಹಣ ತೆಗೆದುಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ, ಆಮ್ಲಜನಕ, ಔಷಧ ಪಡೆಯಲು ಮಾತ್ರವಲ್ಲದೆ, ಕೊನೆಗೆ ಶವಸಂಸ್ಕಾರಕ್ಕೂ ಸರದಿಯಲ್ಲಿ ನಿಲ್ಲುವಂಥ ದುಸ್ಥಿತಿ ನಿರ್ಮಾಣವಾಯಿತು. ಈ ಸಮಸ್ಯೆಗಳಿಂದ ಮುಕ್ತಿ ಸಿಗಬೇಕಾದರೆ ಈ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದು ವಾಗ್ದಾಳಿ ನಡೆಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಎಚ್.ಎಂ. ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕೋವಿಡ್ನಿಂದ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ನಮ್ಮ ಪಕ್ಷದ (ಕಾಂಗ್ರೆಸ್) ಸರ್ಕಾರ ಇದ್ದಿದ್ದರೆ ಬಡವರಿಗೆ 10 ಕಿಲೋ ಅಕ್ಕಿ ಮತ್ತು ₹ 10 ಸಾವಿರ ಪರಿಹಾರ ಕೊಡುತ್ತಿದ್ದೆವು. ಬಡವರಿಗೆ ನೆರವು ನೀಡಿದರೆ ಇವರ ಮನೆಯ ಗಂಟು ಹೋಗುತ್ತದೆಯೇ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದರು.</p>.<p>ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಕೊರೊನಾ ಯೋಧರು, ಪೌರ ಕಾರ್ಮಿಕ<br />ರಿಗೆ ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ ಆಯೋಜಿಸಿದ್ದ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಪ್ಯಾಕೇಜ್ನಲ್ಲಿ ಕೆಲವರಿಗೆ ಪುಡಿಗಾಸು ಘೋಷಿಸಿದೆ. ಅದು ಯಾರಿಗೆ ಸಿಗುವುದೊ ಯಾರಿಗೆ ಸಿಗುವುದಿಲ್ಲವೊ ಗೊತ್ತಿಲ್ಲ. ಈ ಹಿಂದೆ ಘೋಷಿಸಿದ ಪ್ಯಾಕೇಜ್ನಿಂದಲೂ ಯಾರಿಗೂ ಅನುಕೂಲ ಆಗಲಿಲ್ಲ. ಕೋವಿಡ್ನಿಂದ ಬಿಪಿಎಲ್ ಕುಟುಂಬದ ವ್ಯಕ್ತಿ ಮೃತರಾದರೆ, ಆ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಅದನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು. ಆಸ್ಪತ್ರೆಯಲ್ಲಿ ಒಬ್ಬರಿಗೆ ಮಾತ್ರ ಹಣ ಪಡೆಯುತ್ತಾರೆಯೇ’ ಎಂದು ಪ್ರಶ್ನಿಸಿದ ಅವರು, ‘ಕೋವಿಡ್ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ನವರು 25 ಸಾವಿರ ಇರಬಹುದು. ಅಷ್ಟೂ ಮಂದಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನ ತಮ್ಮ ಹಣ ತೆಗೆದುಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ, ಆಮ್ಲಜನಕ, ಔಷಧ ಪಡೆಯಲು ಮಾತ್ರವಲ್ಲದೆ, ಕೊನೆಗೆ ಶವಸಂಸ್ಕಾರಕ್ಕೂ ಸರದಿಯಲ್ಲಿ ನಿಲ್ಲುವಂಥ ದುಸ್ಥಿತಿ ನಿರ್ಮಾಣವಾಯಿತು. ಈ ಸಮಸ್ಯೆಗಳಿಂದ ಮುಕ್ತಿ ಸಿಗಬೇಕಾದರೆ ಈ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದು ವಾಗ್ದಾಳಿ ನಡೆಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಎಚ್.ಎಂ. ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>