<p><strong>ನವದೆಹಲಿ: </strong>ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ.</p>.<p>ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.</p>.<p>ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು.</p>.<p>ಇದೀಗ ಬೆಲ್ಲದ್ ಅವರೊಂದಿಗೆಯೋಗೇಶ್ವರ್ ಹಾಗೂ ಇತರ ಕೆಲವು ಸಮಾನ ಮನಸ್ಕ ಶಾಸಕರೂ ದೆಹಲಿಗೆ ಬಂದಿದ್ದಾರೆ ಎನ್ನಲಾಗಿದ್ದು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಾಗಿ ಮತ್ತೆ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/injustice-to-party-loyalists-says-mla-arvind-bellad-796022.html" target="_blank">ಪಕ್ಷನಿಷ್ಠರಿಗೆ ಅನ್ಯಾಯವಾಗಿದೆ: ಶಾಸಕ ಅರವಿಂದ ಬೆಲ್ಲದ್ </a></p>.<p>ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಮುಂದಿನವಾರ ಬೆಂಗಳೂರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದು, ಅದಕ್ಕೂ ಮೊದಲೇ ಕೆಲವು ಶಾಕಸರ ಗುಂಪು ಅವರಿಗೆ ದೂರು ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.</p>.<p>ಆದರೆ, ವೈಯಕ್ತಿಕ ಕಾರಣದಿಂದ ದೆಹಲಿಗೆ ಬಂದಿದ್ದಾಗಿ 'ಪ್ರಜಾವಾಣಿ'ಗೆ ತಿಳಿಸಿರುವ ಶಾಸಕ ಬೆಲ್ಲದ್, ಯಾವುದೇ ಮುಖಂಡರನ್ನು ಭೇಟಿ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.</p>.<p>ಆಗಾಗ ವೈಯಕ್ತಿಕ ಕೆಲಸ- ಕಾರ್ಯಗಳಿಗಾಗಿ ದೆಹಲಿ ಸೇರಿದಂತೆ ಉತ್ತರ ಭಾರತ ಪ್ರವಾಸಕ್ಕೆ ಬರುವುದಾಗಿ ಹೇಳಿರುವ ಅವರು, ಯಾವುದೇ ರಾಜಕೀಯ ಕಾರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ.</p>.<p>ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.</p>.<p>ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು.</p>.<p>ಇದೀಗ ಬೆಲ್ಲದ್ ಅವರೊಂದಿಗೆಯೋಗೇಶ್ವರ್ ಹಾಗೂ ಇತರ ಕೆಲವು ಸಮಾನ ಮನಸ್ಕ ಶಾಸಕರೂ ದೆಹಲಿಗೆ ಬಂದಿದ್ದಾರೆ ಎನ್ನಲಾಗಿದ್ದು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಾಗಿ ಮತ್ತೆ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/injustice-to-party-loyalists-says-mla-arvind-bellad-796022.html" target="_blank">ಪಕ್ಷನಿಷ್ಠರಿಗೆ ಅನ್ಯಾಯವಾಗಿದೆ: ಶಾಸಕ ಅರವಿಂದ ಬೆಲ್ಲದ್ </a></p>.<p>ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಮುಂದಿನವಾರ ಬೆಂಗಳೂರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದು, ಅದಕ್ಕೂ ಮೊದಲೇ ಕೆಲವು ಶಾಕಸರ ಗುಂಪು ಅವರಿಗೆ ದೂರು ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.</p>.<p>ಆದರೆ, ವೈಯಕ್ತಿಕ ಕಾರಣದಿಂದ ದೆಹಲಿಗೆ ಬಂದಿದ್ದಾಗಿ 'ಪ್ರಜಾವಾಣಿ'ಗೆ ತಿಳಿಸಿರುವ ಶಾಸಕ ಬೆಲ್ಲದ್, ಯಾವುದೇ ಮುಖಂಡರನ್ನು ಭೇಟಿ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.</p>.<p>ಆಗಾಗ ವೈಯಕ್ತಿಕ ಕೆಲಸ- ಕಾರ್ಯಗಳಿಗಾಗಿ ದೆಹಲಿ ಸೇರಿದಂತೆ ಉತ್ತರ ಭಾರತ ಪ್ರವಾಸಕ್ಕೆ ಬರುವುದಾಗಿ ಹೇಳಿರುವ ಅವರು, ಯಾವುದೇ ರಾಜಕೀಯ ಕಾರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>