ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬದಲಾವಣೆ ಚರ್ಚೆ | ದೆಹಲಿಗೆ ಅರವಿಂದ ಬೆಲ್ಲದ್; ವರಿಷ್ಠರ ಭೇಟಿ ಸಾಧ್ಯತೆ

ವೈಯಕ್ತಿಕ ಕೆಲಸಗಳ ಕಾರಣ ನೀಡಿದ ಶಾಸಕ
Last Updated 12 ಜೂನ್ 2021, 5:59 IST
ಅಕ್ಷರ ಗಾತ್ರ

ನವದೆಹಲಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್‌ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು.

ಇದೀಗ ಬೆಲ್ಲದ್ ಅವರೊಂದಿಗೆಯೋಗೇಶ್ವರ್ ಹಾಗೂ ಇತರ‌ ಕೆಲವು ಸಮಾನ‌ ಮನಸ್ಕ ಶಾಸಕರೂ ದೆಹಲಿಗೆ ಬಂದಿದ್ದಾರೆ ಎನ್ನಲಾಗಿದ್ದು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಾಗಿ ಮತ್ತೆ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ‌ ಉಸ್ತುವಾರಿ ಅರುಣ್ ಸಿಂಗ್ ಅವರು ಮುಂದಿನ‌ವಾರ ಬೆಂಗಳೂರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದು, ಅದಕ್ಕೂ ಮೊದಲೇ ಕೆಲವು ಶಾಕಸರ ಗುಂಪು ಅವರಿಗೆ ದೂರು ಸಲ್ಲಿಸುವ ಸಾಧ್ಯತೆ‌ ಇದೆ ಎಂದು ಹೇಳಲಾಗಿದೆ.

ಆದರೆ, ವೈಯಕ್ತಿಕ ಕಾರಣದಿಂದ ದೆಹಲಿಗೆ ಬಂದಿದ್ದಾಗಿ 'ಪ್ರಜಾವಾಣಿ'ಗೆ ತಿಳಿಸಿರುವ‌ ಶಾಸಕ ಬೆಲ್ಲದ್, ಯಾವುದೇ ಮುಖಂಡರನ್ನು ಭೇಟಿ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.

ಆಗಾಗ‌ ವೈಯಕ್ತಿಕ ಕೆಲಸ- ಕಾರ್ಯಗಳಿಗಾಗಿ ದೆಹಲಿ ಸೇರಿದಂತೆ‌ ಉತ್ತರ ಭಾರತ ಪ್ರವಾಸಕ್ಕೆ ಬರುವುದಾಗಿ ಹೇಳಿರುವ ಅವರು, ಯಾವುದೇ ರಾಜಕೀಯ ಕಾರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT