ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ತಪ್ಪೇನು ಎಂದು ಕೇಳಿದ ಸಚಿವ ಸುಧಾಕರ್ ಅವರೇ, ಇಂದಿರಾ ಕ್ಯಾಂಟೀನ್ ಪ್ರಾರಂಭವಾಗುವಾಗ ತಾವು ಕಾಂಗ್ರೆಸ್ನಲ್ಲಿಯೇ ಇದ್ದಿರಿ, ಆಗ ತಾವೇಕೆ ಈ ಪ್ರಶ್ನೆ ಕೇಳಲಿಲ್ಲ? ಗೋಸುಂಬೆಗಳು ವೇಗವಾಗಿ ಬಣ್ಣ ಬದಲಿಸುತ್ತವೆ, ತಾವು ಅದಕ್ಕಿಂತಲೂ ಅತಿ ವೇಗವಾಗಿ ಬಣ್ಣ ಬದಲಿಸುತ್ತೀರಿ ಅಲ್ಲವೇ ಸುಧಾಕರ್?’ ಎಂದು ಪ್ರಶ್ನಿಸಿದೆ.