<p><strong>ಬೆಂಗಳೂರು:</strong> ‘ನಾಯಕತ್ವ ಬದಲಾವಣೆ ಆಗಲೇಬೇಕು. ಮಾಡುವಂತಿದ್ದರೆ, ಜುಲೈ ಒಳಗೆ ಮಾಡಿ. ಇಲ್ಲವಾದರೆ ಮಾಡಲೇಬೇಡಿ’ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ಸಿಂಗ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.</p>.<p>ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ಈ ಬಗ್ಗೆ ಮಾತುಕತೆ ನಡೆಸಿದರು.</p>.<p>‘ಆಡಳಿತ ವೈಖರಿಯ ಲೋಪ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯದ ಬಗ್ಗೆ ಗಮನ ಸೆಳೆದಾಗ ತಾಳ್ಮೆಯಿಂದ ಇರಿ ಎಂದಷ್ಟೇ ಅವರು ಹೇಳಿದರು’ ಎಂದು ಹೆಸರು ಬಹಿರಂಗ ಪಡಿಸಲು ಒಪ್ಪದ ಮುಖಂಡರೊಬ್ಬರು ತಿಳಿಸಿದರು.</p>.<p>‘ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲ ಹರಣ ಮಾಡುವುದರಿಂದ ಪ್ರಯೋಜನವಿಲ್ಲ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಕುಗ್ಗುತ್ತದೆ ಎಂದು ಹೇಳಿದೆ. ಮಾತು ಆಲಿಸಿದ ಅವರು, ಸ್ಪಷ್ಟ ಭರವಸೆ ನೀಡಲಿಲ್ಲ’ ಎಂದರು.</p>.<p><strong>ನಾಯಕತ್ವ ಬದಲಾವಣೆ ಯತ್ನ ನಿಜ: ಈಶ್ವರಪ್ಪ</strong></p>.<p>‘ಯಡಿಯೂರಪ್ಪ ನಾಯಕತ್ವ ಬದಲಾವಣೆಗಾಗಿ ಕೆಲವು ಶಾಸಕರು ದೆಹಲಿಗೆ ಹೋಗಿದ್ದು ನಿಜ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವು ಶಾಸಕರು ಯಡಿಯೂರಪ್ಪನವರೇ 2 ವರ್ಷ ಮುಂದುವರಿಯಲಿ ಎಂದರೆ, ಇನ್ನು ಕೆಲವರು ಬದಲಾಯಿಸಬೇಕು ಎನ್ನುತ್ತಿದ್ದಾರೆ. ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ. ನಾಯಕತ್ವ ವಿಚಾರದಲ್ಲಿ ಏನು ಬೇಕಾದರೂ ಆಗಬಹುದು. ಪಕ್ಷದಲ್ಲಿ ಗೊಂದಲ ಇರುವುದು ನಿಜ’ ಎಂದರು.</p>.<p><strong>ಭಿನ್ನಮತ ಇಲ್ಲ: ಅರುಣ್ ಸಿಂಗ್</strong></p>.<p>‘ಯಡಿಯೂರಪ್ಪ ನೇತೃತ್ವದ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ’ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ ₹1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p><strong>‘ನನಗೂ ಸಿ.ಎಂ ಆಗುವ ಆಸೆ ಇದೆ’</strong></p>.<p>‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರುತ್ತಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ ಸಿಗುತ್ತದೆ. ಬಿಜೆಪಿ ತರಬೇತಿ ಸಂಸ್ಥೆ ಇದ್ದಂತೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾಯಕತ್ವ ಬದಲಾವಣೆ ಆಗಲೇಬೇಕು. ಮಾಡುವಂತಿದ್ದರೆ, ಜುಲೈ ಒಳಗೆ ಮಾಡಿ. ಇಲ್ಲವಾದರೆ ಮಾಡಲೇಬೇಡಿ’ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ಸಿಂಗ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.</p>.<p>ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ಈ ಬಗ್ಗೆ ಮಾತುಕತೆ ನಡೆಸಿದರು.</p>.<p>‘ಆಡಳಿತ ವೈಖರಿಯ ಲೋಪ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯದ ಬಗ್ಗೆ ಗಮನ ಸೆಳೆದಾಗ ತಾಳ್ಮೆಯಿಂದ ಇರಿ ಎಂದಷ್ಟೇ ಅವರು ಹೇಳಿದರು’ ಎಂದು ಹೆಸರು ಬಹಿರಂಗ ಪಡಿಸಲು ಒಪ್ಪದ ಮುಖಂಡರೊಬ್ಬರು ತಿಳಿಸಿದರು.</p>.<p>‘ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲ ಹರಣ ಮಾಡುವುದರಿಂದ ಪ್ರಯೋಜನವಿಲ್ಲ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಕುಗ್ಗುತ್ತದೆ ಎಂದು ಹೇಳಿದೆ. ಮಾತು ಆಲಿಸಿದ ಅವರು, ಸ್ಪಷ್ಟ ಭರವಸೆ ನೀಡಲಿಲ್ಲ’ ಎಂದರು.</p>.<p><strong>ನಾಯಕತ್ವ ಬದಲಾವಣೆ ಯತ್ನ ನಿಜ: ಈಶ್ವರಪ್ಪ</strong></p>.<p>‘ಯಡಿಯೂರಪ್ಪ ನಾಯಕತ್ವ ಬದಲಾವಣೆಗಾಗಿ ಕೆಲವು ಶಾಸಕರು ದೆಹಲಿಗೆ ಹೋಗಿದ್ದು ನಿಜ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವು ಶಾಸಕರು ಯಡಿಯೂರಪ್ಪನವರೇ 2 ವರ್ಷ ಮುಂದುವರಿಯಲಿ ಎಂದರೆ, ಇನ್ನು ಕೆಲವರು ಬದಲಾಯಿಸಬೇಕು ಎನ್ನುತ್ತಿದ್ದಾರೆ. ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ. ನಾಯಕತ್ವ ವಿಚಾರದಲ್ಲಿ ಏನು ಬೇಕಾದರೂ ಆಗಬಹುದು. ಪಕ್ಷದಲ್ಲಿ ಗೊಂದಲ ಇರುವುದು ನಿಜ’ ಎಂದರು.</p>.<p><strong>ಭಿನ್ನಮತ ಇಲ್ಲ: ಅರುಣ್ ಸಿಂಗ್</strong></p>.<p>‘ಯಡಿಯೂರಪ್ಪ ನೇತೃತ್ವದ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ’ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ ₹1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p><strong>‘ನನಗೂ ಸಿ.ಎಂ ಆಗುವ ಆಸೆ ಇದೆ’</strong></p>.<p>‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರುತ್ತಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ ಸಿಗುತ್ತದೆ. ಬಿಜೆಪಿ ತರಬೇತಿ ಸಂಸ್ಥೆ ಇದ್ದಂತೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>