'ರಾಜ್ಯದ ವಿವಿಧೆಡೆ ಗ್ರಾಮಾಂತರ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹೊರಟಾಗ ಬಸ್ ನಿಲ್ದಾಣಗಳಲ್ಲಿ ಬಸ್ ಗಳನ್ನು ನಿಲ್ಲಿಸದೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳ ಕೆಲವು ಚಾಲಕರು, ನಿರ್ವಾಹಕರು ವಿದ್ಯಾರ್ಥಿಗಳ ಬಗ್ಗೆ ಅವಜ್ಞೆ ತೋರುತ್ತಿರುವುದು ಕಂಡುಬರುತ್ತಿದೆ' ಎಂದೂ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.