‘ಅರೆಕಾಲಿಕ ಕಾನೂನು ಸ್ವಯಂ ಸೇವಕರ ಯೋಜನೆಗೆ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ, ಮಾನಸಿಕ ಅಸ್ವಸ್ಥರ ಯೋಜನೆಗಳಿಗೆ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ, ಹಿರಿಯ ನಾಗರಿಕರ ಯೋಜನೆಗೆ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಗೇರಿ, ಮಾನವ ಸಾಗಾಣಿಕೆ ಹಾಗೂ ಲೈಂಗಿಕ ಶೋಷಣೆಯ ಸಂತ್ರಸ್ತರ ಯೋಜನೆಗೆ ನ್ಯಾಯಮೂರ್ತಿ ಅಜಿತ್ ಗುಂಜಾಳ್, ಅಸಂಘಟಿತ ಕಾರ್ಮಿಕರಿಗೆ ಕಾನೂನು ಸೇವೆಗಳ ಯೋಜನೆಗೆ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಹಾಗೂ ಪ್ರಕೃತಿ ವಿಕೋಪ ಸಂತ್ರಸ್ತರ ಯೋಜನೆಗಳ ಜವಾಬ್ದಾರಿಯನ್ನು ನ್ಯಾಯಮೂರ್ತಿ ಕೆ.ಎನ್ ಕೇಶವನಾರಾಯಣ ಅವರಿಗೆ ವಹಿಸಲಾಗಿದೆ’ ಎಂದು ವಿವರಿಸಿದರು.