ಬಿಜೆಪಿಯ ಆಯನೂರು ಮಂಜುನಾಥ್ ಮತ್ತು ಇತರ 11 ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ನ. 25ರಂದು ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿದ 14 ದಿನಗಳ ತರುವಾಯ ಅದನ್ನು ಸದನದಲ್ಲಿ ಸಭಾಪತಿ ಚರ್ಚೆಗೆ ಎತ್ತಿಕೊಳ್ಳಬೇಕಿತ್ತು. ಆದರೆ, ನೋಟಿಸ್ನಲ್ಲಿ ಕೆಲವು ಅನುಮಾನಗಳಿರುವುದರಿಂದ ಕಾನೂನು ತಜ್ಞರ ಸಲಹೆ ಪಡೆದಿದ್ದು, ಅದನ್ನು ಅಧಿಕಾರಿಗಳ ಮೂಲಕ ಎಲ್ಲ ಸದಸ್ಯರಿಗೆ ತಲುಪಿಸಲಾಗುವುದು ಎಂದು ಪ್ರಕಟಿಸಿದ ಸಭಾಪತಿ, ಡಿ.10ರಂದು ಸಂಜೆ ಅನಿರ್ದಿಷ್ಟಾವಧಿಗೆ ಸದನವನ್ನು ಮುಂದೂಡಿದ್ದರು. ಇದರಿಂದ ಕೆರಳಿದ್ದ ಬಿಜೆಪಿ ಸದಸ್ಯರು, ಸಭಾಪತಿ ಅಸಾಂವಿಧಾನಿಕವಾಗಿ ವರ್ತಿಸಿದ್ದಾರೆಂದು ದೂರಿ ರಾಜಭವನದ ಕದ ತಟ್ಟಿದ್ದರು.