<p><strong>ಬೆಂಗಳೂರು</strong>: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (ಕೆಕೆಆರ್ಡಿಬಿ) ಖಾಲಿ ಇರುವ ಪ್ರಮುಖ ಹುದ್ದೆಗಳನ್ನು ಹತ್ತು ದಿನಗಳೊಳಗೆ ಭರ್ತಿ ಮಾಡುವ ಮೂಲಕ ಮಂಡಳಿಯ ಬಲವರ್ಧನೆ ಮಾಡ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷಗಳ ಸದಸ್ಯರು, ಈ ಭಾಗದ ಸಮಸ್ಯೆಗಳನ್ನು ವಿವರಿಸಿ, ಘೋರ ಅನ್ಯಾಯವಾಗಿದೆ ಎಂದು ಪ್ರತಿಪಾದಿಸಿದ್ದರು.</p>.<p>ಚರ್ಚೆಗೆ ಉತ್ತರ ನೀಡಿದ ಬೊಮ್ಮಾಯಿ, ‘ಕೆಕೆಆರ್ಡಿಬಿಗೆ ಕಾಯಂ ಕಾರ್ಯದರ್ಶಿಯನ್ನು ನೇಮಿಸಲಾಗುವುದು. ಮಂಡಳಿಯ ಎಲ್ಲ ಪ್ರಮುಖ ಹುದ್ದೆಗಳು ಹಾಗೂ ಎಂಜಿನಿಯರಿಂಗ್ ವಿಭಾಗದಲ್ಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕ ಮಾಡಲಾಗುವುದು’ ಎಂದರು.</p>.<p>ಕೋವಿಡ್ ಕಾರಣದಿಂದ ಆರ್ಥಿಕ ಸಂಕಷ್ಟ ಉಂಟಾಗಿದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ನಿರ್ಬಂಧಿಸಲಾಗಿತ್ತು. ಈ ನಿರ್ಬಂಧ ತೆರವು ಮಾಡಿ, ತುರ್ತು ಅಗತ್ಯವಿರುವ ಹುದ್ದೆಗಳನ್ನು ಮೊದಲ ಹಂತದಲ್ಲಿ ಮತ್ತು ಇತರ ಖಾಲಿ ಹುದ್ದೆಗಳನ್ನು ಎರಡನೇ ಹಂತದಲ್ಲಿ ಭರ್ತಿ ಮಾಡಲಾಗುವುದು. ವಿಧಾನಸೌಧದಲ್ಲಿರುವ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು ಎಂದರು.</p>.<p>‘ಖಾಲಿ ಇರುವ 6,779 ಶಿಕ್ಷಕರ ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗಿದೆ. 14,809 ಹುದ್ದೆಗಳನ್ನು ನೇರ ನೇಮಕಾತಿಯಡಿ ತುಂಬಲಾಗುವುದು’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.</p>.<p><strong>ತನಿಖೆಯ ಭರವಸೆ:</strong>‘ಕೆಕೆಆರ್ಡಿಬಿಗೆ ಕೊಟ್ಟ ಅನುದಾನದ ಪೈಕಿ, ₹100 ಕೋಟಿಯನ್ನು ಕಲ್ಯಾಣ ಕರ್ನಾಟಕ ಮಾನವ ಕೃಷಿ ಅಭಿವೃದ್ಧಿ ಸಂಘಕ್ಕೆ ಕೊಡಲಾಗಿದೆ. ಈ ಅನುದಾನ ದುರ್ಬಳಕೆಯಾಗಿದೆ’ ಎಂಬ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ ಆರೋಪಿಸಿದರು.</p>.<p>‘ಈ ಸಂಸ್ಥೆಯ ಬಗ್ಗೆಯೂ ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಕ್ರಮ ಜರುಗಿಸುತ್ತೇವೆ’ ಎಂದು ಸಚಿವ ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (ಕೆಕೆಆರ್ಡಿಬಿ) ಖಾಲಿ ಇರುವ ಪ್ರಮುಖ ಹುದ್ದೆಗಳನ್ನು ಹತ್ತು ದಿನಗಳೊಳಗೆ ಭರ್ತಿ ಮಾಡುವ ಮೂಲಕ ಮಂಡಳಿಯ ಬಲವರ್ಧನೆ ಮಾಡ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷಗಳ ಸದಸ್ಯರು, ಈ ಭಾಗದ ಸಮಸ್ಯೆಗಳನ್ನು ವಿವರಿಸಿ, ಘೋರ ಅನ್ಯಾಯವಾಗಿದೆ ಎಂದು ಪ್ರತಿಪಾದಿಸಿದ್ದರು.</p>.<p>ಚರ್ಚೆಗೆ ಉತ್ತರ ನೀಡಿದ ಬೊಮ್ಮಾಯಿ, ‘ಕೆಕೆಆರ್ಡಿಬಿಗೆ ಕಾಯಂ ಕಾರ್ಯದರ್ಶಿಯನ್ನು ನೇಮಿಸಲಾಗುವುದು. ಮಂಡಳಿಯ ಎಲ್ಲ ಪ್ರಮುಖ ಹುದ್ದೆಗಳು ಹಾಗೂ ಎಂಜಿನಿಯರಿಂಗ್ ವಿಭಾಗದಲ್ಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕ ಮಾಡಲಾಗುವುದು’ ಎಂದರು.</p>.<p>ಕೋವಿಡ್ ಕಾರಣದಿಂದ ಆರ್ಥಿಕ ಸಂಕಷ್ಟ ಉಂಟಾಗಿದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ನಿರ್ಬಂಧಿಸಲಾಗಿತ್ತು. ಈ ನಿರ್ಬಂಧ ತೆರವು ಮಾಡಿ, ತುರ್ತು ಅಗತ್ಯವಿರುವ ಹುದ್ದೆಗಳನ್ನು ಮೊದಲ ಹಂತದಲ್ಲಿ ಮತ್ತು ಇತರ ಖಾಲಿ ಹುದ್ದೆಗಳನ್ನು ಎರಡನೇ ಹಂತದಲ್ಲಿ ಭರ್ತಿ ಮಾಡಲಾಗುವುದು. ವಿಧಾನಸೌಧದಲ್ಲಿರುವ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು ಎಂದರು.</p>.<p>‘ಖಾಲಿ ಇರುವ 6,779 ಶಿಕ್ಷಕರ ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗಿದೆ. 14,809 ಹುದ್ದೆಗಳನ್ನು ನೇರ ನೇಮಕಾತಿಯಡಿ ತುಂಬಲಾಗುವುದು’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.</p>.<p><strong>ತನಿಖೆಯ ಭರವಸೆ:</strong>‘ಕೆಕೆಆರ್ಡಿಬಿಗೆ ಕೊಟ್ಟ ಅನುದಾನದ ಪೈಕಿ, ₹100 ಕೋಟಿಯನ್ನು ಕಲ್ಯಾಣ ಕರ್ನಾಟಕ ಮಾನವ ಕೃಷಿ ಅಭಿವೃದ್ಧಿ ಸಂಘಕ್ಕೆ ಕೊಡಲಾಗಿದೆ. ಈ ಅನುದಾನ ದುರ್ಬಳಕೆಯಾಗಿದೆ’ ಎಂಬ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ ಆರೋಪಿಸಿದರು.</p>.<p>‘ಈ ಸಂಸ್ಥೆಯ ಬಗ್ಗೆಯೂ ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಕ್ರಮ ಜರುಗಿಸುತ್ತೇವೆ’ ಎಂದು ಸಚಿವ ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>