ಜನವರಿ 28ರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಆದರೆ, ಹಿಂದಿನ ಅಧಿವೇಶನದಲ್ಲೇ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಯತ್ನಿಸಿದ್ದ ಬಿಜೆಪಿ ಸದಸ್ಯರು ಮತ್ತೆ ನೋಟಿಸ್ ನೀಡಿದ್ದಾರೆ. ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರವಾಗಿರುವ ಉಪ ಸಭಾಪತಿ ಹುದ್ದೆಗೆ ಜ.29ರಂದು ಚುನಾವಣೆ ನಿಗದಿಯಾಗಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ, ನೂತನ ಉಪ ಸಭಾಪತಿ ಆಯ್ಕೆಯಾದ ಬಳಿಕ ಪ್ರತಾಪಚಂದ್ರ ಶೆಟ್ಟಿ ಅವರು ಸಭಾಪತಿ ಹುದ್ದೆ ತೊರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.