ಮಂಗಳವಾರ, ಕಾಂಗ್ರೆಸ್ ವತಿಯಿಂದ ನಡೆದ ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ದೇಶದಲ್ಲಿ ಮೇಲು - ಕೀಳೆಂಬ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ಹುಟ್ಟು ಹಾಕಿದ್ದು ಬಿಜೆಪಿ ಹಾಗೂ ಆರೆಸ್ಸೆಸ್. ಈ ದೇಶಕ್ಕೆ ಆಹಾರ ಭದ್ರತೆ ಕೊಟ್ಟಿದ್ದು, ಪಾಕಿಸ್ತಾನವನ್ನು ಬಗ್ಗುಬಡಿದು ಬಾಂಗ್ಲಾದೇಶ ಉದಯಕ್ಕೆ ಕಾರಣರಾಗಿದ್ದು ಇಂದಿರಾಗಾಂಧಿ ಹಾಗೂ ಬಾಬು ಜಗಜೀವನ್ ರಾಮ್. ಮೋದಿ ಅಥವಾ ಬೊಮ್ಮಾಯಿ ಕೊಟ್ಟಿದ್ದಲ್ಲ ಎಂದು ಹೇಳಿದ್ದರು.