<p><strong>ಉಡುಪಿ: </strong>ಬ್ರಹ್ಮಾವರ ತಾಲ್ಲೂಕಿನ ನೈಲಾಡಿ ಬಳಿ ಭಾನುವಾರ ಬೆಳಗಿನ ಜಾವ ಆಹಾರ ಹುಡುಕಿಬಂದಿದ್ದ ಚಿರತೆ ಕೆಲಕಾಲ ಮನೆಯ ಕೋಣೆಯೊಳಗೆ ಬಂಧಿಯಾಗಿತ್ತು.</p>.<p>ಸುದ್ದಿತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಒಂದೂವರೆ ಗಂಟೆಯ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿದರು.<br />ಚಿರತೆ ಕಾರ್ಯಾಚರಣೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು.</p>.<p><strong>ಚಿರತೆ ಬಂಧಿಯಾಗಿದ್ದು ಹೇಗೆ?</strong></p>.<p>ಚಿರತೆ ಮೊದಲು ಮನೆಯ ಮುಂದೆ ಕಟ್ಟಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಬೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದಾಗ ಬೆನ್ನಟ್ಟಿದ ಚಿರತೆಯೂ ಕೋಣೆ ಸೇರಿದೆ.</p>.<p>ಸದ್ದು ಕೇಳಿ ಎಚ್ಚರಗೊಂಡ ಮನೆಯವರು ಕೋಣೆ ಪ್ರವೇಶಿದಾಗ ಚಿರತೆ ಇದ್ದದ್ದನ್ನು ಕಂಡು ಬಾಗಿಲು ಹಾಕಿಕೊಂಡಿದ್ದಾರೆ.</p>.<p>ಚಿರತೆ ಸೆರೆ ಬಳಿಕ ಸಮೀಪದ ಸೈಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬ್ರಹ್ಮಾವರ ತಾಲ್ಲೂಕಿನ ನೈಲಾಡಿ ಬಳಿ ಭಾನುವಾರ ಬೆಳಗಿನ ಜಾವ ಆಹಾರ ಹುಡುಕಿಬಂದಿದ್ದ ಚಿರತೆ ಕೆಲಕಾಲ ಮನೆಯ ಕೋಣೆಯೊಳಗೆ ಬಂಧಿಯಾಗಿತ್ತು.</p>.<p>ಸುದ್ದಿತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಒಂದೂವರೆ ಗಂಟೆಯ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿದರು.<br />ಚಿರತೆ ಕಾರ್ಯಾಚರಣೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು.</p>.<p><strong>ಚಿರತೆ ಬಂಧಿಯಾಗಿದ್ದು ಹೇಗೆ?</strong></p>.<p>ಚಿರತೆ ಮೊದಲು ಮನೆಯ ಮುಂದೆ ಕಟ್ಟಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಬೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದಾಗ ಬೆನ್ನಟ್ಟಿದ ಚಿರತೆಯೂ ಕೋಣೆ ಸೇರಿದೆ.</p>.<p>ಸದ್ದು ಕೇಳಿ ಎಚ್ಚರಗೊಂಡ ಮನೆಯವರು ಕೋಣೆ ಪ್ರವೇಶಿದಾಗ ಚಿರತೆ ಇದ್ದದ್ದನ್ನು ಕಂಡು ಬಾಗಿಲು ಹಾಕಿಕೊಂಡಿದ್ದಾರೆ.</p>.<p>ಚಿರತೆ ಸೆರೆ ಬಳಿಕ ಸಮೀಪದ ಸೈಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>