ಚಳಿಗಾಲದ ರಜೆ ನಂತರ ಹೊಸ ವರ್ಷಾರಂಭದ ಮೊದಲ ಕಲಾಪ ಸೋಮವಾರ ನಡೆಯಿತು. ಬೆಳಗ್ಗೆ 10.30ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆಯೇ ನ್ಯಾಯಪೀಠದಲ್ಲಿ ಆಸೀನರಾದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ಕೋರ್ಟ್ ಹಾಲ್ನಲ್ಲಿ ಹಾಜರಿದ್ದ ವಕೀಲರು, ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ, ‘ಪ್ರತಿಯೊಬ್ಬರಿಗೂ ಹೊಸ ವರ್ಷದ ಶುಭಾಶಯಗಳು’ ಎಂದರು.