ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ– ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಮಾಧ್ಯಮ ವ್ಯಾಖ್ಯಾನ ಮಾಡಲಿ: ಡಿಕೆಶಿ

Last Updated 28 ಮಾರ್ಚ್ 2023, 12:38 IST
ಅಕ್ಷರ ಗಾತ್ರ

ಮಂಡ್ಯ: ‘ಬಿಜೆಪಿ– ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರೇ ಮಾತನಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ನಾನು ಮಾತನಾಡಬೇಕಾಗಿಲ್ಲ, ಮಾಧ್ಯಮಗಳೇ ವ್ಯಾಖ್ಯಾನ ಮಾಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಂಗಳವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಸಚಿವ ಕೆ.ಸಿ.ನಾರಾಯಣಗೌಡ ಅವರಾಗಲಿ, ಸಿ.ಪಿ.ಯೋಗೇಶ್ವರ್‌ ಆಗಲಿ ನಮ್ಮ ಜೊತೆ ಮಾತನಾಡಿಲ್ಲ. ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸಲಾಗುವುದು’ ಎಂದರು.

‘ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರುವುದಿಲ್ಲ, ಬಿಜೆಪಿಗೆ ವೋಟು ಹಾಕುವುದು ವ್ಯರ್ಥ. ರಾಜ್ಯದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪಕ್ಷಕ್ಕೆ ಉತ್ತಮ ಅವಕಾಶವಿದೆ. ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಈಗಾಗಲೇ ಅವಕಾಶ ಕೊಟ್ಟಿದ್ದೀರಿ, ನನಗೂ ಒಮ್ಮೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು.

‘ಶ್ರೀರಂಗಪಟ್ಟಣಕ್ಕೆ ಬಹಳ ದೊಡ್ಡ ಇತಿಹಾಸವಿದೆ, ಸಿ.ಟಿ.ರವಿ, ಅಶ್ವತ್ಥ ನಾರಾಯಣ ಮುಂತಾದವರು ಇತಿಹಾಸಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದರು, ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದರು. ಆದರೆ ಅವರ ಪ್ರಯತ್ನ ಸಫಲವಾಗಲಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT