ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಆಗಬೇಕು ಎಂದು ನಾನು ಹೇಳಿಲ್ಲ. ಬ್ರಾಹ್ಮಣರು ಸೇರಿದಂತೆ ಯಾರನ್ನೂ ಅವಮಾನ ಮಾಡಿಲ್ಲ. ಶಿವಾಜಿ ಮಹಾರಾಜ, ಮಹಾತ್ಮ ಗಾಂಧಿಯನ್ನು ಕೊಂದ ವಂಶದ ಡಿಎನ್ಎ ಇರುವವರನ್ನು ಮುಖ್ಯಮಂತ್ರಿ ಮಾಡಲು ನಡೆಯುತ್ತಿರುವ ಪ್ರಯತ್ನದ ಬಗ್ಗೆ ನಾನು ಮಾತನಾಡಿದ್ದೇನೆ’ ಎಂದರು.