ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಇವಿಎಂಗಳು ನಾಪತ್ತೆ ಆಗಿದ್ದರೆ ದೇಶದಲ್ಲಿ ವಿರೋಧ ಪಕ್ಷಗಳು ಮತ್ತು ಸಾಮಾನ್ಯ ಜನರ ಸುಮ್ಮನೆ ಕೂರಲು ಸಾಧ್ಯವಿತ್ತೆ? ದೊಡ್ಡ ಗದ್ದಲವೇ ಆಗುತ್ತಿತ್ತು. ಅವರೊಂದು ಸಂಶಯದ ಬೀಜ ಬಿತ್ತಿದ್ದಾರೆ. ಅದಕ್ಕೆ ಸೂಕ್ತ ಉತ್ತರ ತರಿಸಿ, ಸದಸ್ಯರಿಗೆ ಕೊಡುವುದು ನಮ್ಮ ಜವಾಬ್ದಾರಿ’ ಎಂದು ಅವರು ಹೇಳಿದರು.