<p><strong>ಬೆಂಗಳೂರು: </strong>'ಭಾಗ್ಯ ಲಕ್ಷ್ಮಿ' ಯೋಜನೆಯಡಿ ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಭಾರತೀಯ ಜೀವ ವಿಮಾ ಕಂಪನಿಯ (ಎಲ್ಐಸಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>'ಭಾಗ್ಯ ಲಕ್ಷ್ಮಿ' ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರಿಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂಪಾಯಿ ನೀಡಲು ಎಲ್ಐಸಿಯು ಅಸಹಾಯಕತೆ ವ್ಯಕ್ತಪಡಿಸಿತ್ತು. ಹೀಗಾಗಿ, ಈ ಯೋಜನೆಯನ್ನುಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.</p>.<p>ಮುಖ್ಯಮಂತ್ರಿ ಅವರನ್ನು ಮಂಗಳವಾರ ಭೇಟಿ ಮಾಡಿದ ಎಲ್ಐಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ನೇತೃತ್ವದ ಅಧಿಕಾರಿಗಳ ನಿಯೋಗ, 'ಭಾಗ್ಯ ಲಕ್ಷ್ಮಿ' ಯೋಜನೆಯನ್ನು ಎಲ್ಐಸಿ ಮೂಲಕವೇ ಜಾರಿಗೊಳಿಸುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, "ಭಾಗ್ಯ ಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪರಿಶೀಲಿಸಲಾಗುವುದು' ಎಂದರು.</p>.<p>ಎಲ್ಐಸಿ ಅಧಿಕಾರಿಗಳ ನಿಯೋಗದ ಭೇಟಿ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ನಾಗಲಾಂಬಿಕಾ ದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>'ಭಾಗ್ಯ ಲಕ್ಷ್ಮಿ' ಯೋಜನೆಯಡಿ ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಭಾರತೀಯ ಜೀವ ವಿಮಾ ಕಂಪನಿಯ (ಎಲ್ಐಸಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>'ಭಾಗ್ಯ ಲಕ್ಷ್ಮಿ' ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರಿಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂಪಾಯಿ ನೀಡಲು ಎಲ್ಐಸಿಯು ಅಸಹಾಯಕತೆ ವ್ಯಕ್ತಪಡಿಸಿತ್ತು. ಹೀಗಾಗಿ, ಈ ಯೋಜನೆಯನ್ನುಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.</p>.<p>ಮುಖ್ಯಮಂತ್ರಿ ಅವರನ್ನು ಮಂಗಳವಾರ ಭೇಟಿ ಮಾಡಿದ ಎಲ್ಐಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ನೇತೃತ್ವದ ಅಧಿಕಾರಿಗಳ ನಿಯೋಗ, 'ಭಾಗ್ಯ ಲಕ್ಷ್ಮಿ' ಯೋಜನೆಯನ್ನು ಎಲ್ಐಸಿ ಮೂಲಕವೇ ಜಾರಿಗೊಳಿಸುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, "ಭಾಗ್ಯ ಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪರಿಶೀಲಿಸಲಾಗುವುದು' ಎಂದರು.</p>.<p>ಎಲ್ಐಸಿ ಅಧಿಕಾರಿಗಳ ನಿಯೋಗದ ಭೇಟಿ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ನಾಗಲಾಂಬಿಕಾ ದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>