ವಿಧಾನ ಪರಿಷತ್ನಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಬುದ್ಧಿವಂತರೇ ತಂತ್ರಜ್ಞಾನ ದುರುಪಯೋಗಪಡಿಸಿಕೊಂಡು ದರೋಡೆ ಮಾಡುತ್ತಿದ್ದಾರೆ. ಸೈಬರ್ ವಂಚನೆಗೆ ಒಳಗಾದವರು 112 ಸಂಖ್ಯೆಗೆ ಘಟನೆ ನಡೆದ ಎರಡು ಗಂಟೆ ಒಳಗೆ ದೂರವಾಣಿ ಕರೆ ಮಾಡಿದರೆ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿ ಹಣ ವರ್ಗಾವಣೆಯಾಗದಂತೆ ಯತ್ನಿಸಲಾಗುವುದು’ ಎಂದು ವಿವರಿಸಿದರು.