ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಂಭ್ರಮ; ಲೇಖನ ಆಹ್ವಾನ

Last Updated 8 ಮಾರ್ಚ್ 2023, 19:47 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಸಾಹಿತಿ ಪೂರ್ಣಚಂದ್ರ ತೇಜಸ್ವಿ ನೆನಪಿನಾರ್ಥ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಏಪ್ರಿಲ್‌ 5ರಿಂದ 7ರವರೆಗೆ ರಾಜ್ಯಮಟ್ಟದ ಜೀವಿಲೋಕ ಸಾಹಿತ್ಯ ಸಂಭ್ರಮ ಆಯೋಜಿಸಲಾಗಿದೆ.

ಕುವೆಂಪು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಪರಿಸರ, ನಿಸರ್ಗ ರಕ್ಷಣಾ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಭಾಗವಹಿಸಲು ಇಚ್ಛಿಸುವವರು ಜೀವಿಲೋಕ ಕುರಿತ ತಮ್ಮ ಕವನ, ಕಿರುಕಥೆ, ಚಿತ್ರಪಟ ಕಥನ, ಪ್ರಬಂಧ ಹಾಗೂ ಬೇರೆ ಭಾಷೆಗಳ ಜೀವಿಲೋಕ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿ ಇದೇ 18ರೊಳಗೆ ಕಳಿಸಬೇಕು. ಆಯ್ಕೆಯಾದ ಸಾಹಿತ್ಯ ಪ್ರಕಾರಗಳನ್ನು ‘ಜೀವಿಲೋಕ ಸಾಹಿತ್ಯ ಸಂಭ್ರಮ’ದಲ್ಲಿ ಪ್ರಸ್ತುತಪಡಿಸಲು ಅವಕಾಶ ಕಲ್ಪಿಸಲಾಗುವುದು.

ಮಾಹಿತಿಗೆ ಮೊ: 94480 77019 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT