<p><strong>ಬೆಂಗಳೂರು: </strong>‘ಸಾಲದ ಮೊತ್ತ ಲೆಕ್ಕಾಚಾರ ಮಾಡುವಾಗ ವೃದ್ಧಿ ದರ ಶೇ 7ಕ್ಕೆ ಇಳಿಸಲು ಕೇಂದ್ರ ಸರ್ಕಾರ ಒಪ್ಪಿರುವುದರಿಂದ ವಿಶೇಷ ಗವಾಕ್ಷಿ ಮೂಲಕ ರಾಜ್ಯಕ್ಕೆ ಸಾಲ ಸೌಲಭ್ಯ ಮೊತ್ತ ₹ 11,324 ಕೋಟಿಯಿಂದ ₹ 12,400 ಕೋಟಿಗೆ ಹೆಚ್ಚಳವಾಗಲಿದೆ’ ಎಂದು ಜಿಎಸ್ಟಿ ಪರಿಷತ್ತಿನ 42ನೇ ಸಭೆಯಲ್ಲಿ ಭಾಗವಹಿಸಿದ ರಾಜ್ಯದ ಪ್ರತಿನಿಧಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಎಸ್ಟಿ ನಷ್ಟ ಪರಿಹಾರದ ಅಲಭ್ಯತೆಯಿಂದಾಗಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು ಕೇಂದ್ರ ಸರ್ಕಾರ ಮುಂದಿಟ್ಟಿದ್ದ ಎರಡು ಆಯ್ಕೆಗಳಲ್ಲಿ, ಜಿಎಸ್ಟಿ ಸೆಸ್ ಹಾಗೂ ವಿಶೇಷ ರೂಪದ ಸಾಲ ಪಡೆಯುವ ವಿಧಾನವನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರ ಈಗಾಗಲೇ ನಿರ್ಧರಿಸಿದೆ.</p>.<p>‘ಆಯ್ಕೆ 1ರ (ಸೆಸ್ ಹಾಗೂ ಕೇಂದ್ರ ಸರ್ಕಾರವೇ ವಿಶೇಷ ಗವಾಕ್ಷಿ(ವಿಂಡೋ) ಮೂಲಕ ಕೊಡಿಸುವ ಸಾಲ ಪಡೆಯು<br />ವುದು) ಅಡಿಯಲ್ಲಿ ಸಾಲ ಮೊತ್ತವನ್ನು ಲೆಕ್ಕಾಚಾರ ಮಾಡುವಾಗ ಶೇ 10ರ ವೃದ್ಧಿ ದರ ಪ್ರಸ್ತಾವನೆಯನ್ನು ಹಿಂದಿನ ಸಭೆ<br />ಯಲ್ಲಿ ಪರಿಗಣಿಸಲಾಗಿತ್ತು. ವೃದ್ಧಿ ದರ ಕಡಿಮೆ ಮಾಡುವಂತೆ ರಾಜ್ಯ ಸರ್ಕಾರ ಸಲಹೆ ನೀಡಿತ್ತು. ವೃದ್ಧಿ ದರ ಇಳಿಸಿದ್ದ<br />ರಿಂದ ಎಲ್ಲ ರಾಜ್ಯಗಳಿಗೆ ಲಭ್ಯವಿರುವ ಸಾಲದ ಮೊತ್ತ ₹ 97 ಸಾವಿರ ಕೋಟಿಯಿಂದ ₹1.10 ಲಕ್ಷ ಕೋಟಿಗಳಿಗೆ ಹೆಚ್ಚಳ<br />ವಾಗಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>‘ರಾಜ್ಯಗಳಿಗಾಗಿ ವಿಶೇಷ ಕಡಿಮೆ ದರದ ಬಡ್ಡಿ ವಿಧಿಸಬೇಕು. ಅಗತ್ಯಬಿದ್ದರೆ ಮುಂದಿನ ವರ್ಷಕ್ಕೂ ವಿಸ್ತರಣೆಯಾಗುವಂತೆ ಮತ್ತು ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಸಾಲ ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡಬೇಕು’ ಎಂದೂ ಸಭೆಯಲ್ಲಿ ಬೊಮ್ಮಾಯಿ ಮನವಿ ಮಾಡಿದರು.</p>.<p>‘ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಸೆಪ್ಟೆಂಬರ್ 2020ರವರೆಗೆ ಸಂಗ್ರಹಿಸಿದಸುಮಾರು ₹ 25 ಸಾವಿರ ಕೋಟಿ ಸೆಸ್ ಮೊತ್ತವನ್ನು ಕೇಂದ್ರ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. ಈಗಾಗಲೇ ಸೆಸ್ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>‘ಬಡ್ಡಿಯೂ ಸೇರಿದಂತೆ ರಾಜ್ಯಗಳ ನಷ್ಟ ಪರಿಹಾರದ ಅರ್ಹತೆಗೆ ಸಮನಾದ ಪೂರ್ಣ ಮೊತ್ತವನ್ನು ಎಲ್ಲ ರಾಜ್ಯಗಳಿಗೆ ನೀಡಲು 2022ರ ನಂತರವೂ ಸೆಸ್ ಸಂಗ್ರಹ ವಿಸ್ತರಿಸುವಂತೆ ಈ ಹಿಂದಿನ ಜಿಎಸ್ಟಿ ಮಂಡಳಿ ಸಭೆಯಲ್ಲಿ ರಾಜ್ಯ ಸರ್ಕಾರ ಮಾಡಿದ್ದ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿದೆ’ ಎಂದೂ ತಿಳಿಸಿದ್ದಾರೆ.</p>.<p>‘ಕೋವಿಡ್ನಿಂದ ಕರ್ನಾಟಕ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯದ ಬಂಡವಾಳ ವೆಚ್ಚ ಮತ್ತು ಚಾಲ್ತಿ ವೆಚ್ಚದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ಬಜೆಟ್ನಲ್ಲಿ ಪ್ರಸ್ತಾಪಿಸಿದ ಯೋಜನೆಗಳನ್ನು ತಕ್ಷಣದಿಂದ ಜಾರಿಗೊಳಿಸಬೇಕಿದೆ’ ಎಂದೂ ಬೊಮ್ಮಾಯಿ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಾಲದ ಮೊತ್ತ ಲೆಕ್ಕಾಚಾರ ಮಾಡುವಾಗ ವೃದ್ಧಿ ದರ ಶೇ 7ಕ್ಕೆ ಇಳಿಸಲು ಕೇಂದ್ರ ಸರ್ಕಾರ ಒಪ್ಪಿರುವುದರಿಂದ ವಿಶೇಷ ಗವಾಕ್ಷಿ ಮೂಲಕ ರಾಜ್ಯಕ್ಕೆ ಸಾಲ ಸೌಲಭ್ಯ ಮೊತ್ತ ₹ 11,324 ಕೋಟಿಯಿಂದ ₹ 12,400 ಕೋಟಿಗೆ ಹೆಚ್ಚಳವಾಗಲಿದೆ’ ಎಂದು ಜಿಎಸ್ಟಿ ಪರಿಷತ್ತಿನ 42ನೇ ಸಭೆಯಲ್ಲಿ ಭಾಗವಹಿಸಿದ ರಾಜ್ಯದ ಪ್ರತಿನಿಧಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಎಸ್ಟಿ ನಷ್ಟ ಪರಿಹಾರದ ಅಲಭ್ಯತೆಯಿಂದಾಗಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು ಕೇಂದ್ರ ಸರ್ಕಾರ ಮುಂದಿಟ್ಟಿದ್ದ ಎರಡು ಆಯ್ಕೆಗಳಲ್ಲಿ, ಜಿಎಸ್ಟಿ ಸೆಸ್ ಹಾಗೂ ವಿಶೇಷ ರೂಪದ ಸಾಲ ಪಡೆಯುವ ವಿಧಾನವನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರ ಈಗಾಗಲೇ ನಿರ್ಧರಿಸಿದೆ.</p>.<p>‘ಆಯ್ಕೆ 1ರ (ಸೆಸ್ ಹಾಗೂ ಕೇಂದ್ರ ಸರ್ಕಾರವೇ ವಿಶೇಷ ಗವಾಕ್ಷಿ(ವಿಂಡೋ) ಮೂಲಕ ಕೊಡಿಸುವ ಸಾಲ ಪಡೆಯು<br />ವುದು) ಅಡಿಯಲ್ಲಿ ಸಾಲ ಮೊತ್ತವನ್ನು ಲೆಕ್ಕಾಚಾರ ಮಾಡುವಾಗ ಶೇ 10ರ ವೃದ್ಧಿ ದರ ಪ್ರಸ್ತಾವನೆಯನ್ನು ಹಿಂದಿನ ಸಭೆ<br />ಯಲ್ಲಿ ಪರಿಗಣಿಸಲಾಗಿತ್ತು. ವೃದ್ಧಿ ದರ ಕಡಿಮೆ ಮಾಡುವಂತೆ ರಾಜ್ಯ ಸರ್ಕಾರ ಸಲಹೆ ನೀಡಿತ್ತು. ವೃದ್ಧಿ ದರ ಇಳಿಸಿದ್ದ<br />ರಿಂದ ಎಲ್ಲ ರಾಜ್ಯಗಳಿಗೆ ಲಭ್ಯವಿರುವ ಸಾಲದ ಮೊತ್ತ ₹ 97 ಸಾವಿರ ಕೋಟಿಯಿಂದ ₹1.10 ಲಕ್ಷ ಕೋಟಿಗಳಿಗೆ ಹೆಚ್ಚಳ<br />ವಾಗಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>‘ರಾಜ್ಯಗಳಿಗಾಗಿ ವಿಶೇಷ ಕಡಿಮೆ ದರದ ಬಡ್ಡಿ ವಿಧಿಸಬೇಕು. ಅಗತ್ಯಬಿದ್ದರೆ ಮುಂದಿನ ವರ್ಷಕ್ಕೂ ವಿಸ್ತರಣೆಯಾಗುವಂತೆ ಮತ್ತು ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಸಾಲ ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡಬೇಕು’ ಎಂದೂ ಸಭೆಯಲ್ಲಿ ಬೊಮ್ಮಾಯಿ ಮನವಿ ಮಾಡಿದರು.</p>.<p>‘ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಸೆಪ್ಟೆಂಬರ್ 2020ರವರೆಗೆ ಸಂಗ್ರಹಿಸಿದಸುಮಾರು ₹ 25 ಸಾವಿರ ಕೋಟಿ ಸೆಸ್ ಮೊತ್ತವನ್ನು ಕೇಂದ್ರ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. ಈಗಾಗಲೇ ಸೆಸ್ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>‘ಬಡ್ಡಿಯೂ ಸೇರಿದಂತೆ ರಾಜ್ಯಗಳ ನಷ್ಟ ಪರಿಹಾರದ ಅರ್ಹತೆಗೆ ಸಮನಾದ ಪೂರ್ಣ ಮೊತ್ತವನ್ನು ಎಲ್ಲ ರಾಜ್ಯಗಳಿಗೆ ನೀಡಲು 2022ರ ನಂತರವೂ ಸೆಸ್ ಸಂಗ್ರಹ ವಿಸ್ತರಿಸುವಂತೆ ಈ ಹಿಂದಿನ ಜಿಎಸ್ಟಿ ಮಂಡಳಿ ಸಭೆಯಲ್ಲಿ ರಾಜ್ಯ ಸರ್ಕಾರ ಮಾಡಿದ್ದ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿದೆ’ ಎಂದೂ ತಿಳಿಸಿದ್ದಾರೆ.</p>.<p>‘ಕೋವಿಡ್ನಿಂದ ಕರ್ನಾಟಕ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯದ ಬಂಡವಾಳ ವೆಚ್ಚ ಮತ್ತು ಚಾಲ್ತಿ ವೆಚ್ಚದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ಬಜೆಟ್ನಲ್ಲಿ ಪ್ರಸ್ತಾಪಿಸಿದ ಯೋಜನೆಗಳನ್ನು ತಕ್ಷಣದಿಂದ ಜಾರಿಗೊಳಿಸಬೇಕಿದೆ’ ಎಂದೂ ಬೊಮ್ಮಾಯಿ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>