<p><strong>ಬೆಂಗಳೂರು</strong>: ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಬಿಜೆಪಿ ಮುಖಭಂಗ ಅನುಭವಿಸಿದೆ.</p>.<p>ಒಟ್ಟು 10 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ 6, ಜೆಡಿಎಸ್ 2 ಮತ್ತು ಬಿಜೆಪಿ 1 ರಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲಿವೆ. ಬಳ್ಳಾರಿ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಆದರೆ, ಬೀದರ್ ನಗರಸಭೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ.</p>.<p>ಕೋವಿಡ್ ಎರಡನೇ ಅಲೆಯ ಮಧ್ಯೆಯೂ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅತ್ಯಧಿಕ ಸ್ಥಳೀಯ ಸಂಸ್ಥೆಗಳನ್ನು ಗೆದ್ದಿರುವುದರಿಂದ ಅದರ ವಿಶ್ವಾಸ ಇಮ್ಮಡಿಯಾಗಿದೆ. ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬಲಹೀನವಾಗಿದೆ ಎಂಬ ವಿಶ್ಲೇಷಣೆಗೆ ಶುಕ್ರವಾರ ಪ್ರಕಟಗೊಂಡ ಫಲಿತಾಂಶ ಇಂಬು ಕೊಟ್ಟಿದೆ.</p>.<p>ಜೆಡಿಎಸ್ ತನ್ನ ಭದ್ರಕೋಟೆಯಾದ ಚನ್ನಪಟ್ಟಣ ನಗರಸಭೆ ಮತ್ತು ಇತ್ತೀಚಿನ ವರ್ಷಗಳಲ್ಲೇ ಮೊದಲ ಬಾರಿಗೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪುರಸಭೆಗಳಲ್ಲಿ ಗೆಲುವು ಸಾಧಿಸಿದೆ.</p>.<p>ಮಡಿಕೇರಿ ನಗರಸಭೆ ಅಧಿಕಾರ ಹಿಡಿಯುವಲ್ಲಿ ಮಾತ್ರ ಬಿಜೆಪಿ ಯಶಸ್ಸು ಸಾಧಿಸಿದೆ. ಇಲ್ಲಿ 5 ಸ್ಥಾನಗಳನ್ನು ಗೆದ್ದಿರುವ ಎಸ್ಡಿಪಿಐ ವಿರೋಧ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನಗಳಿಗೆ ಕುಸಿದಿವೆ. ಬೀದರ್ ನಗರಸಭೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂನ ಇಬ್ಬರು, ಆಮ್ ಆದ್ಮಿ ಪಕ್ಷದ ಒಬ್ಬರು ಗೆಲುವು ಸಾಧಿಸಿದ್ದಾರೆ.</p>.<p>ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆಯ ಭದ್ರಾವತಿ ನಗರಸಭೆಗೆ ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆ ರಾಜಕೀಯವಾಗಿ ಸಂಚಲನ ಸೃಷ್ಟಿಸಿತ್ತು. ಇದರಿಂದ ಬಿಜೆಪಿಗೆ ಅನುಕೂಲ ಆಗಬಹುದು ಎಂದು ಭಾವಿಸಲಾಗಿತ್ತು.</p>.<p>ಆದರೆ, ಕಾಂಗ್ರೆಸ್ ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಜಿಲ್ಲೆಯಲ್ಲಿ ಆಪಕ್ಷ ದೊಡ್ಡ ಆಂದೋಲನವನ್ನೇ ನಡೆಸಿತ್ತು.</p>.<p>ಇದು ಕಾಂಗ್ರೆಸ್ಗೆ ವರವಾಗಿ ಪರಿಣಮಿಸಿದಂತಾಗಿದೆ. ಬಿಜೆಪಿ ಶಾಸಕರಿರುವ ತೀರ್ಥಹಳ್ಳಿಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ.</p>.<p>ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಪುತ್ರ ಶ್ರವಣ್ ಕುಮಾರ್ ರೆಡ್ಡಿ ಸೋಲು ಅನುಭವಿಸಿದ್ದಾರೆ.</p>.<p>ರೆಡ್ಡಿ ಸಹೋದರರ ಪ್ರಭಾವವಿರುವ ಜಿಲ್ಲೆಯಲ್ಲಿ ಒಮ್ಮೆ ಮಾತ್ರ ಅಧಿಕಾರ ಹಿಡಿಯಲು ಯಶಸ್ವಿಯಾಗಿತ್ತು. ಘಟಾನುಘಟಿ ನಾಯಕರುಗಳಿದ್ದರೂ ಇಲ್ಲಿ ಬೇರು ಬಿಡಲು ಕಮಲ ಪಕ್ಷಕ್ಕೆ ಸಾಧ್ಯವಾಗಿಲ್ಲ.</p>.<p>**</p>.<p>ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ಕೊರೊನಾ ವೇಳೆ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವುದರಿಂದ ತಕ್ಕ ಪಾಠ ಕಲಿಸಿದ್ದಾರೆ.<br /><em><strong>-ಸಿದ್ಧರಾಮಯ್ಯ, ವಿರೋಧ ಪಕ್ಷದ ನಾಯಕ</strong></em></p>.<p><em><strong>**</strong></em></p>.<p>ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ, ಅಪಪ್ರಚಾರಗಳ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನತೆ ಪಕ್ಷದ ಕೈ ಹಿಡಿದಿದ್ದಾರೆ.<br /><em><strong>-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಬಿಜೆಪಿ ಮುಖಭಂಗ ಅನುಭವಿಸಿದೆ.</p>.<p>ಒಟ್ಟು 10 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ 6, ಜೆಡಿಎಸ್ 2 ಮತ್ತು ಬಿಜೆಪಿ 1 ರಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲಿವೆ. ಬಳ್ಳಾರಿ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಆದರೆ, ಬೀದರ್ ನಗರಸಭೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ.</p>.<p>ಕೋವಿಡ್ ಎರಡನೇ ಅಲೆಯ ಮಧ್ಯೆಯೂ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅತ್ಯಧಿಕ ಸ್ಥಳೀಯ ಸಂಸ್ಥೆಗಳನ್ನು ಗೆದ್ದಿರುವುದರಿಂದ ಅದರ ವಿಶ್ವಾಸ ಇಮ್ಮಡಿಯಾಗಿದೆ. ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬಲಹೀನವಾಗಿದೆ ಎಂಬ ವಿಶ್ಲೇಷಣೆಗೆ ಶುಕ್ರವಾರ ಪ್ರಕಟಗೊಂಡ ಫಲಿತಾಂಶ ಇಂಬು ಕೊಟ್ಟಿದೆ.</p>.<p>ಜೆಡಿಎಸ್ ತನ್ನ ಭದ್ರಕೋಟೆಯಾದ ಚನ್ನಪಟ್ಟಣ ನಗರಸಭೆ ಮತ್ತು ಇತ್ತೀಚಿನ ವರ್ಷಗಳಲ್ಲೇ ಮೊದಲ ಬಾರಿಗೆ ದೇವನಹಳ್ಳಿ ತಾಲ್ಲೂಕು ವಿಜಯಪುರ ಪುರಸಭೆಗಳಲ್ಲಿ ಗೆಲುವು ಸಾಧಿಸಿದೆ.</p>.<p>ಮಡಿಕೇರಿ ನಗರಸಭೆ ಅಧಿಕಾರ ಹಿಡಿಯುವಲ್ಲಿ ಮಾತ್ರ ಬಿಜೆಪಿ ಯಶಸ್ಸು ಸಾಧಿಸಿದೆ. ಇಲ್ಲಿ 5 ಸ್ಥಾನಗಳನ್ನು ಗೆದ್ದಿರುವ ಎಸ್ಡಿಪಿಐ ವಿರೋಧ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನಗಳಿಗೆ ಕುಸಿದಿವೆ. ಬೀದರ್ ನಗರಸಭೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂನ ಇಬ್ಬರು, ಆಮ್ ಆದ್ಮಿ ಪಕ್ಷದ ಒಬ್ಬರು ಗೆಲುವು ಸಾಧಿಸಿದ್ದಾರೆ.</p>.<p>ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆಯ ಭದ್ರಾವತಿ ನಗರಸಭೆಗೆ ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆ ರಾಜಕೀಯವಾಗಿ ಸಂಚಲನ ಸೃಷ್ಟಿಸಿತ್ತು. ಇದರಿಂದ ಬಿಜೆಪಿಗೆ ಅನುಕೂಲ ಆಗಬಹುದು ಎಂದು ಭಾವಿಸಲಾಗಿತ್ತು.</p>.<p>ಆದರೆ, ಕಾಂಗ್ರೆಸ್ ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಜಿಲ್ಲೆಯಲ್ಲಿ ಆಪಕ್ಷ ದೊಡ್ಡ ಆಂದೋಲನವನ್ನೇ ನಡೆಸಿತ್ತು.</p>.<p>ಇದು ಕಾಂಗ್ರೆಸ್ಗೆ ವರವಾಗಿ ಪರಿಣಮಿಸಿದಂತಾಗಿದೆ. ಬಿಜೆಪಿ ಶಾಸಕರಿರುವ ತೀರ್ಥಹಳ್ಳಿಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ.</p>.<p>ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಪುತ್ರ ಶ್ರವಣ್ ಕುಮಾರ್ ರೆಡ್ಡಿ ಸೋಲು ಅನುಭವಿಸಿದ್ದಾರೆ.</p>.<p>ರೆಡ್ಡಿ ಸಹೋದರರ ಪ್ರಭಾವವಿರುವ ಜಿಲ್ಲೆಯಲ್ಲಿ ಒಮ್ಮೆ ಮಾತ್ರ ಅಧಿಕಾರ ಹಿಡಿಯಲು ಯಶಸ್ವಿಯಾಗಿತ್ತು. ಘಟಾನುಘಟಿ ನಾಯಕರುಗಳಿದ್ದರೂ ಇಲ್ಲಿ ಬೇರು ಬಿಡಲು ಕಮಲ ಪಕ್ಷಕ್ಕೆ ಸಾಧ್ಯವಾಗಿಲ್ಲ.</p>.<p>**</p>.<p>ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ಕೊರೊನಾ ವೇಳೆ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವುದರಿಂದ ತಕ್ಕ ಪಾಠ ಕಲಿಸಿದ್ದಾರೆ.<br /><em><strong>-ಸಿದ್ಧರಾಮಯ್ಯ, ವಿರೋಧ ಪಕ್ಷದ ನಾಯಕ</strong></em></p>.<p><em><strong>**</strong></em></p>.<p>ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ, ಅಪಪ್ರಚಾರಗಳ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನತೆ ಪಕ್ಷದ ಕೈ ಹಿಡಿದಿದ್ದಾರೆ.<br /><em><strong>-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>