ಮುಂಬೈನಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಿದ್ದರಿಂದ ಅಲ್ಲಿ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದೆ. ಪ್ರಧಾನಮಂತ್ರಿಯವರು ಲಾಕ್ಡೌನ್ ಮಾಡುವ ಅಧಿಕಾರವನ್ನು ರಾಜ್ಯಗಳಿಗೇ ನೀಡಿದ್ದಾರೆ. ಸುಪ್ರೀಂಕೋರ್ಟ್ ಕೂಡ ಲಾಕ್ಡೌನ್ ಮಾಡುವಂತೆ ಸೂಚಿಸಿದೆ. ಪರಿಸ್ಥಿತಿಯ ಗಂಭೀರತೆ ನೋಡಿಕೊಂಡು ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಿ ಲಾಕ್ಡೌನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸದಾನಂದಗೌಡ ಹೇಳಿದರು.