<p><strong>ಬೆಂಗಳೂರು:</strong> ಲೋಕಾಯುಕ್ತ ಕಾರ್ಯವೈಖರಿ ಮತ್ತು ನ್ಯಾಯದಾನದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ವಿಧಾನಪರಿಷತ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಲೋಕಾಯುಕ್ತಕ್ಕೆ ಸಲ್ಲಿಕೆಯಾಗುವ ದೂರುಗಳನ್ನು ಇತ್ಯರ್ಥಪಡಿಸಲು ಕಾಲಮಿತಿ ನಿಗದಿಗೆ ತಂದ ಕಾಯ್ದೆ ತಿದ್ದುಪಡಿ ಮಸೂದೆ ಮೇಲೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಿಷತ್ ಸದಸ್ಯರು, ‘ಈ ತಿದ್ದುಪಡಿ ಮೊದಲೇ ಆಗಬೇಕಿತ್ತು’ ಎಂದರು.</p>.<p>ಮಸೂದೆ ಮಂಡಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಲೋಕಾಯುಕ್ತಕ್ಕೆ ದೂರು ಬಂದಿದ್ದರೆ 90 ದಿನಗಳ ಒಳಗೆ ಪರಿಹರಿಸಬೇಕು. ಸಾಧ್ಯವಾಗದೇ ಇದ್ದರೆ, ಕಾರಣ ನಮೂದಿಸಿ ಹೆಚ್ಚುವರಿ 90 ದಿನ ಕಾಲಾವಕಾಶ ಪಡೆಯಬಹುದು. 6 ತಿಂಗಳಲ್ಲಿಯೂ ಇತ್ಯರ್ಥವಾಗದೇ ಇದ್ದರೆ ಮತ್ತೆ 6 ತಿಂಗಳ ಹೆಚ್ಚುವರಿ ಅವಧಿ ಪಡೆಯಲು ಅವಕಾಶವಿದೆ. ಪ್ರಾಥಮಿಕ ತನಿಖೆ, ಅಂತಿಮ ವರದಿ ವಿಳಂಬ ಆಗಬಾರದು ಎಂಬ ಕಾರಣಕ್ಕೆ ಕಾಲಮಿತಿ ನಿಗದಿಪಡಿಸಲು ತಿದ್ದುಪಡಿ ತರಲಾಗುತ್ತಿದೆ’ ಎಂದರು.</p>.<p>ಜೆಡಿಎಸ್ನ ಮರಿತಿಬ್ಬೇಗೌಡ, ‘ನ್ಯಾಯದಾನದಲ್ಲಿ ವಿಳಂಬ ತಪ್ಪಿಸಲು ಒಳ್ಳೆಯ ತಿದ್ದುಪಡಿ ಇದು. ಲೋಕಾಯುಕ್ತಕ್ಕೆ ಸಿಬ್ಬಂದಿ ನೇಮಿಸುವಾಗ ಹಣ ಕೊಟ್ಟವರಿಗೆ ಅವಕಾಶ ನೀಡಲಾಗುತ್ತದೆ. ಭ್ರಷ್ಟ ಅಧಿಕಾರಿಗಳನ್ನು ನೇಮಿಸಿದರೆ ತನಿಖೆ ವಿಳಂಬ ಆಗಲಿದೆ, ನ್ಯಾಯವೂ ಸಿಗುವುದಿಲ್ಲ’ ಎಂದರು.</p>.<p>‘ಲೋಕಾಯುಕ್ತ ಎಂದರೆ ಹಿಂದೆ ಭಯ ಇತ್ತು. ಈಗ ಏನೂ ಉಳಿದಿಲ್ಲ. ದೂರುಗಳ ಆಧಾರದಲ್ಲಿ ಕಾಲಾವಕಾಶ ವರ್ಗೀಕರಣ ಮಾಡಬೇಕು. ಕಾಲಮಿತಿಯ ನಂತರವೂ ತನಿಖೆ ಮುಗಿಯದಿದ್ದರೆ ಏನು ಕ್ರಮ’ ಎಂದು ಜೆಡಿಎಸ್ನ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.</p>.<p>‘ದೂರುದಾರರು ಹೈಕೋರ್ಟ್ಗೆ ಹೋಗಲು ಅವಕಾಶವಿದೆ. ಸದ್ಯದ ಸ್ಥಿತಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ಬಾಕಿ ಇರುವುದರಿಂದ ಹೈಕೋರ್ಟ್ಗೆ ಹೋಗಲು ಅಡ್ಡಿ ಆಗುತ್ತಿತ್ತು. ಇನ್ನು ಆ ಸಮಸ್ಯೆ ಇರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಾಯುಕ್ತ ಕಾರ್ಯವೈಖರಿ ಮತ್ತು ನ್ಯಾಯದಾನದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ವಿಧಾನಪರಿಷತ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಲೋಕಾಯುಕ್ತಕ್ಕೆ ಸಲ್ಲಿಕೆಯಾಗುವ ದೂರುಗಳನ್ನು ಇತ್ಯರ್ಥಪಡಿಸಲು ಕಾಲಮಿತಿ ನಿಗದಿಗೆ ತಂದ ಕಾಯ್ದೆ ತಿದ್ದುಪಡಿ ಮಸೂದೆ ಮೇಲೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಿಷತ್ ಸದಸ್ಯರು, ‘ಈ ತಿದ್ದುಪಡಿ ಮೊದಲೇ ಆಗಬೇಕಿತ್ತು’ ಎಂದರು.</p>.<p>ಮಸೂದೆ ಮಂಡಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಲೋಕಾಯುಕ್ತಕ್ಕೆ ದೂರು ಬಂದಿದ್ದರೆ 90 ದಿನಗಳ ಒಳಗೆ ಪರಿಹರಿಸಬೇಕು. ಸಾಧ್ಯವಾಗದೇ ಇದ್ದರೆ, ಕಾರಣ ನಮೂದಿಸಿ ಹೆಚ್ಚುವರಿ 90 ದಿನ ಕಾಲಾವಕಾಶ ಪಡೆಯಬಹುದು. 6 ತಿಂಗಳಲ್ಲಿಯೂ ಇತ್ಯರ್ಥವಾಗದೇ ಇದ್ದರೆ ಮತ್ತೆ 6 ತಿಂಗಳ ಹೆಚ್ಚುವರಿ ಅವಧಿ ಪಡೆಯಲು ಅವಕಾಶವಿದೆ. ಪ್ರಾಥಮಿಕ ತನಿಖೆ, ಅಂತಿಮ ವರದಿ ವಿಳಂಬ ಆಗಬಾರದು ಎಂಬ ಕಾರಣಕ್ಕೆ ಕಾಲಮಿತಿ ನಿಗದಿಪಡಿಸಲು ತಿದ್ದುಪಡಿ ತರಲಾಗುತ್ತಿದೆ’ ಎಂದರು.</p>.<p>ಜೆಡಿಎಸ್ನ ಮರಿತಿಬ್ಬೇಗೌಡ, ‘ನ್ಯಾಯದಾನದಲ್ಲಿ ವಿಳಂಬ ತಪ್ಪಿಸಲು ಒಳ್ಳೆಯ ತಿದ್ದುಪಡಿ ಇದು. ಲೋಕಾಯುಕ್ತಕ್ಕೆ ಸಿಬ್ಬಂದಿ ನೇಮಿಸುವಾಗ ಹಣ ಕೊಟ್ಟವರಿಗೆ ಅವಕಾಶ ನೀಡಲಾಗುತ್ತದೆ. ಭ್ರಷ್ಟ ಅಧಿಕಾರಿಗಳನ್ನು ನೇಮಿಸಿದರೆ ತನಿಖೆ ವಿಳಂಬ ಆಗಲಿದೆ, ನ್ಯಾಯವೂ ಸಿಗುವುದಿಲ್ಲ’ ಎಂದರು.</p>.<p>‘ಲೋಕಾಯುಕ್ತ ಎಂದರೆ ಹಿಂದೆ ಭಯ ಇತ್ತು. ಈಗ ಏನೂ ಉಳಿದಿಲ್ಲ. ದೂರುಗಳ ಆಧಾರದಲ್ಲಿ ಕಾಲಾವಕಾಶ ವರ್ಗೀಕರಣ ಮಾಡಬೇಕು. ಕಾಲಮಿತಿಯ ನಂತರವೂ ತನಿಖೆ ಮುಗಿಯದಿದ್ದರೆ ಏನು ಕ್ರಮ’ ಎಂದು ಜೆಡಿಎಸ್ನ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.</p>.<p>‘ದೂರುದಾರರು ಹೈಕೋರ್ಟ್ಗೆ ಹೋಗಲು ಅವಕಾಶವಿದೆ. ಸದ್ಯದ ಸ್ಥಿತಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ಬಾಕಿ ಇರುವುದರಿಂದ ಹೈಕೋರ್ಟ್ಗೆ ಹೋಗಲು ಅಡ್ಡಿ ಆಗುತ್ತಿತ್ತು. ಇನ್ನು ಆ ಸಮಸ್ಯೆ ಇರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>