ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಸದಸ್ಯತ್ವ ಪ್ರತಿಯನ್ನು ಪಾಟೀಲ ಅವರಿಗೆ ಹಸ್ತಾಂತರಿಸಿ,‘ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿ ಸುವ ಉದ್ದೇಶದಿಂದ ‘ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಅಭಿಯಾನ ಪ್ರಾರಂಭಿಸಲಾಗಿದೆ. ಇದರ ಭಾಗವಾಗಿ ರಾಜ್ಯದಾದ್ಯಂತ ಜನಸಾಮಾನ್ಯರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನ ಮಾಡಿದ ಮಹನೀಯರುಗಳ ಮನೆ ಹಾಗೂ ಕಚೇರಿಗೆ ಭೇಟಿ ನೀಡಲಾಗುತ್ತಿದೆ’ ಎಂದರು.