ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಕೋಡ: ಪ್ರೀತಿಸಿ ಮದುವೆಯಾದ ಜೋಡಿಗೆ ಸ್ವಜಾತಿಯವರಿಂದಲೇ ಬಹಿಷ್ಕಾರ

Last Updated 13 ನವೆಂಬರ್ 2022, 20:48 IST
ಅಕ್ಷರ ಗಾತ್ರ

ನರಗುಂದ (ಗದಗ ಜಿಲ್ಲೆ): ಪ್ರೀತಿಸಿ ಮದುವೆಯಾದ ಒಂದೇ ಜಾತಿಯ ಯುವಕ, ಯುವತಿ 14 ವರ್ಷಗಳ ನಂತರ ಗ್ರಾಮಕ್ಕೆ ಬಂದಿದ್ದು, ಅವರ ಕುಟುಂಬವನ್ನು ಅದೇ ಜಾತಿಯವರು ಬಹಿಷ್ಕರಿಸಿದ ಪ್ರಕರಣ ತಾಲ್ಲೂಕಿನ ಸುರಕೋಡದಲ್ಲಿ ನಡೆದಿದೆ.

ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ.

‘ಶೋಭಾ ಮನೆಯವರು ಕೆಲವರೊಂದಿಗೆ ಬಂದು ಶಿವಾನಂದ ಸುರಕೋಡ (ಮಾದರ) ಅವರ ತಂದೆ ಸಾಬಣ್ಣನವರ ಮನೆಗೆ ಕೀಲಿ ಹಾಕಿ ಕುಟುಂಬವನ್ನು ಹೊರಹಾಕಿದ್ದಾರೆ. ನಮ್ಮ ಜನಾಂಗದವರ ಜೊತೆ ನಾವು ಯಾರಾದರೂ ಮಾತನಾಡಿದರೆ ₹1 ಸಾವಿರ ದಂಡ ಹಾಗೂ ಬಹಿಷ್ಕಾರ ಹಾಕುವುದಾಗಿ ಎಚ್ಚರಿಸಿದ್ದಾರೆ’ ಎಂದು ಶಿವಾನಂದ ಅವರ ಸಹೋದರ ಮುತ್ತು ಸುರಕೋಡ ಭಾನುವಾರ ತಿಳಿಸಿದರು.

‘ಸುರಕೋಡ ಗ್ರಾಮಕ್ಕೆ ಶನಿವಾರ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬಹಿಷ್ಕಾರ ಹಾಕಿರುವುದನ್ನು ಪರಿಶೀಲಿಸಲಾಗಿದೆ. ಕುಟುಂಬಕ್ಕೆ ಪ್ರತ್ಯೇಕ ನಿವೇಶನ ನೀಡಲು ಸ್ಥಳ ಗುರುತಿಸಲಾಗಿದೆ’ ಎಂದು ತಹಶೀಲ್ದಾರ್ ಎ.ಡಿ. ಅಮರವಾದಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT