‘ವಿದ್ಯಾರ್ಥಿನಿಗೆ ನ್ಯಾಯ ಸಿಕ್ಕಿರುವುದು ಸಂತಸ ಸಂಗತಿ. ಆದರೆ, ಅಧಿಕಾರಿಗಳ ಕರ್ತವ್ಯ ಚ್ಯುತಿಯಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿದೆ. ವ್ಯವಸ್ಥೆಯ ಬಗ್ಗೆಯೇ ಭರವಸೆ ಕಳೆದುಕೊಳ್ಳು
ವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯ ನೆರವಿಗೆ ಬರಬೇಕಾದ ಇಲಾಖೆ, ಆಕೆಯ ಆತ್ಮವಿಶ್ವಾಸ ಕಸಿಯುವ ಕೆಲಸ ಮಾಡಿದೆ. ಇದಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಹೀಗಾಗಿ, ತಕ್ಷಣವೇ ಈ ಕುರಿತು ವರದಿ ಸಲ್ಲಿಸಿ’ ಎಂದು ತಮ್ಮ ಟಿಪ್ಪಣಿಯಲ್ಲಿ ಸಚಿವರು ಸೂಚಿಸಿದ್ದಾರೆ.