ಬೆಂಗಳೂರು: ‘ಎಲ್ಪಿಜಿ ಸಂಪರ್ಕ ಹೊಂದಿರದ ಬಿಪಿಎಲ್ ಕಾರ್ಡುದಾರರಿಗೆ ತಿಂಗಳಿಗೆ ಮೂರು ಲೀಟರ್ ಸೀಮೆಎಣ್ಣೆ ಪೂರೈಸುವುದು ಸರ್ಕಾರದ ಜವಾಬ್ದಾರಿ’ ಎಂದು ಹೈಕೋರ್ಟ್ ಹೇಳಿದೆ.
ವಕೀಲ ಎಸ್.ಚಂದ್ರಶೇಖರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಅಭಿಪ್ರಾಯಪಟ್ಟಿದೆ.
‘2016 ರ ಜುಲೈ 27ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಮೂರು ಲೀಟರ್ ಸೀಮೆಎಣ್ಣೆಯನ್ನು ಸರ್ಕಾರ ನೀಡಲೇಬೇಕು. ಅದನ್ನು ಸೂಕ್ಷ್ಮವಾಗಿ ಕಾರ್ಯಗತಗೊಳಿಸಬೇಕು ಮತ್ತು ಅಧಿಸೂಚನೆ ಚಾಲ್ತಿಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿತು.