<p><strong>ಬೆಂಗಳೂರು: </strong>ಟಿವಿ, ಬೈಕ್, ಫ್ರಿಡ್ಜ್ ಹೊಂದಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂಬ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅವರ ಹೇಳಿಕೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳ ಜತೆ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಬಡವರ ಪರ ಇದೆ. ಸಚಿವರು ದ್ವಂದ್ವ ಹೇಳಿಕೆಗಳನ್ನು ನೀಡಬಾರದು. ಅದು ಸಚಿವ ಕತ್ತಿಯವರ ಹೇಳಿಕೆಯೋ ಅಥವಾ ಯಾರೋ ಐಎಎಸ್ ಅಧಿಕಾರಿ ಹೇಳಿದ್ದನ್ನೇ ಅವರು ಹೇಳಿದ್ದಾರೋ ಗೊತ್ತಿಲ್ಲ’ ಎಂದರು.</p>.<p>ಬಡವರು ಟಿವಿ ನೋಡಬಾರದೆ? ಈಗ ಬ್ಯಾಂಕ್ಗಳಲ್ಲಿ ಠೇವಣಿ ಇಲ್ಲದಿದ್ದರೂ ಬೈಕ್ ಖರೀದಿಗೆ ಸಾಲ ನೀಡಲಾಗುತ್ತದೆ. ಈ ಯಾವುದಕ್ಕೂ ಸರ್ಕಾರ ಹಣ ನೀಡುವುದಿಲ್ಲ. ಅನರ್ಹರು ಪಡೆದಿರುವ ಬಿಪಿಎಲ್ ಚೀಟಿಗಳನ್ನು ಬೇಕಾದರೆ ರದ್ದುಮಾಡಲಿ. ಆದರೆ, ಬಡವರಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಮಾಡಲು ಬಿಡುವುದಿಲ್ಲ ಎಂದು ಹೇಳಿದರು.</p>.<p>ಅಪಪ್ರಚಾರ ಬೇಡ: ‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ನಿಂದ ಚುನಾವಣೆಗೆ ಸ್ಪರ್ಧಿಸಿ ಸೋತ ವ್ಯಕ್ತಿಯೊಬ್ಬರು ಸಕ್ರಿಯರಾಗಿದ್ದಾರೆ. ಅವರು ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಈ ಕೆಲಸವನ್ನು ತಕ್ಷಣ ನಿಲ್ಲಿಸಬೇಕು’ ಎಂದು ರೇಣುಕಾಚಾರ್ಯ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಟಿವಿ, ಬೈಕ್, ಫ್ರಿಡ್ಜ್ ಹೊಂದಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂಬ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅವರ ಹೇಳಿಕೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳ ಜತೆ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಬಡವರ ಪರ ಇದೆ. ಸಚಿವರು ದ್ವಂದ್ವ ಹೇಳಿಕೆಗಳನ್ನು ನೀಡಬಾರದು. ಅದು ಸಚಿವ ಕತ್ತಿಯವರ ಹೇಳಿಕೆಯೋ ಅಥವಾ ಯಾರೋ ಐಎಎಸ್ ಅಧಿಕಾರಿ ಹೇಳಿದ್ದನ್ನೇ ಅವರು ಹೇಳಿದ್ದಾರೋ ಗೊತ್ತಿಲ್ಲ’ ಎಂದರು.</p>.<p>ಬಡವರು ಟಿವಿ ನೋಡಬಾರದೆ? ಈಗ ಬ್ಯಾಂಕ್ಗಳಲ್ಲಿ ಠೇವಣಿ ಇಲ್ಲದಿದ್ದರೂ ಬೈಕ್ ಖರೀದಿಗೆ ಸಾಲ ನೀಡಲಾಗುತ್ತದೆ. ಈ ಯಾವುದಕ್ಕೂ ಸರ್ಕಾರ ಹಣ ನೀಡುವುದಿಲ್ಲ. ಅನರ್ಹರು ಪಡೆದಿರುವ ಬಿಪಿಎಲ್ ಚೀಟಿಗಳನ್ನು ಬೇಕಾದರೆ ರದ್ದುಮಾಡಲಿ. ಆದರೆ, ಬಡವರಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಮಾಡಲು ಬಿಡುವುದಿಲ್ಲ ಎಂದು ಹೇಳಿದರು.</p>.<p>ಅಪಪ್ರಚಾರ ಬೇಡ: ‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ನಿಂದ ಚುನಾವಣೆಗೆ ಸ್ಪರ್ಧಿಸಿ ಸೋತ ವ್ಯಕ್ತಿಯೊಬ್ಬರು ಸಕ್ರಿಯರಾಗಿದ್ದಾರೆ. ಅವರು ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಈ ಕೆಲಸವನ್ನು ತಕ್ಷಣ ನಿಲ್ಲಿಸಬೇಕು’ ಎಂದು ರೇಣುಕಾಚಾರ್ಯ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>