ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಪ್ರತಿಕ್ರಿಯೆ ನೀಡುವುದು ಕಷ್ಟ. ಆದರೆ, ಮಠ ಹಾಗೂ ಮುರುಘಾ ಪರಂಪರೆಯ ಜೊತೆಗೆ ನಾವು ಬದ್ಧವಾಗಿ ನಿಲ್ಲುತ್ತೇವೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.