ಪಟ್ಟಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು ಹಿಂದೂಪರ ಸಂಘಟನೆಗಳು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿವೆ.ಆರ್ಎಸ್ಎಸ್ ಹಾಗೂ ಬಜರಂಗದಳ ಸೇರಿ ಬಿಜೆಪಿ ಪರಿವಾರದ ಸಂಸ್ಥೆಗಳು ಆ ಪಕ್ಷಕ್ಕೆ ಅಧಿಕಾರ ಕೊಡಿಸಲು ತೋರುವ ಬದ್ಧತೆಯನ್ನು ಮತದಾರರ ಬಗ್ಗೆ ತೋರುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು.