ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಪಾದಯಾತ್ರೆ ಮಾದರಿಯಲ್ಲೇ ಮಹದಾಯಿ ಹೋರಾಟ: ಸತೀಶ ಜಾರಕಿಹೊಳಿ

Last Updated 18 ಜನವರಿ 2022, 10:12 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್‌ ಸೋಂಕು ಹರಡುವಿಕೆ ಕಡಿಮೆಯಾದ ಬಳಿಕ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿಯೇ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಆ ಹೋರಾಟ ಎಲ್ಲಿಂದ ಆರಂಭ ಮಾಡಬೇಕು ಎನ್ನುವುದನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪುರೇಷೆ ತಯಾರಿಸಲಾಗುವುದು. ಪಾದಯಾತ್ರೆ ನಡೆಸುವುದು ನಿಶ್ಚಿತ’ ಎಂದರು.

‘ಮೇಕೆದಾಟು ಜಲಾಶಯ ನಿರ್ಮಾಣದ ಬಗ್ಗೆ ಹೋರಾಟ ಆರಂಭಿಸಿ ಸರ್ಕಾರದ ಗಮನಸೆಳೆಯಲಾಗಿದೆ. ಆ ಹೋರಾಟ ಅರ್ಧಕ್ಕೆ ನಿಂತಿಲ್ಲ; ಯಶ್ವಸಿಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT