<p><strong>ನವದೆಹಲಿ: </strong>ಮಹದಾಯಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ತಕರಾರು ಅರ್ಜಿಯನ್ನು ತ್ವರಿತ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ. </p>.<p>ಮಹದಾಯಿ ಯೋಜನೆಯ ಕಾಮಗಾರಿಗೆ ಕೈಗೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಗೋವಾ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ. </p>.<p>ಗೋವಾ ಸರ್ಕಾರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವೆಂಕಟೇಶ ದೊಂಡ್, ‘ಗೋವಾದ ಮಹದಾಯಿ ವನ್ಯಜೀವಿ ಧಾಮದ ಪಕ್ಕದಲ್ಲಿನ ಜಲಮೂಲಗಳ ನೀರನ್ನು ಬಳಸಿಕೊಂಡು ಕಳಸಾ–ಬಂಡೂರಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಗೋವಾ ಸರ್ಕಾರದ ತಕರಾರು ಇದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿಯವರು ಟ್ವೀಟ್ ಸಹ ಮಾಡಿದ್ದಾರೆ’ ಎಂದರು. </p>.<p>ಆಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ‘ಫೆಬ್ರುವರಿ 13ರಂದು ಅರ್ಜಿಯ ವಿಚಾರಣೆ ನಡೆಸಲು ಈಗಾಗಲೇ ಪಟ್ಟಿ ಮಾಡಲಾಗಿದೆ. ನಾನು ಈ ಅರ್ಜಿಯ ವಿಚಾರಣೆ ನಡೆಸಲು ಆಗುವುದಿಲ್ಲ. ಬೇರೊಂದು ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ’ ಎಂದರು. </p>.<p>ಆಗ ಗೋವಾ ಪರ ವಕೀಲರು, ‘ನದಿ ನೀರು ತಿರುವು ಕಾಮಗಾರಿಗೆ ಫೆಬ್ರುವರಿ 13ರೊಳಗೆ ಚಾಲನೆ ಸಿಗಲಿದೆ. ಕರ್ನಾಟಕ ಮುಖ್ಯಮಂತ್ರಿಯವರು ಈ ಕುರಿತು ಹೇಳಿಕೆ ನೀಡಿದ್ದಾರೆ’ ಎಂದು ಪೀಠದ ಗಮನ ಸೆಳೆದರು. </p>.<p>ನಂತರ ನ್ಯಾಯಪೀಠ, ಫೆಬ್ರುವರಿ 13ರೊಳಗೆ ಅರ್ಜಿಯ ವಿಚಾರಣೆಯನ್ನು ಪಟ್ಟಿ ಮಾಡಲು ಸಮ್ಮತಿಸಿತು. </p>.<p>ಮಹದಾಯಿ ಯೋಜನೆಯ ಪರಿಷ್ಜೃತ ಡಿಪಿಆರ್ ಅನ್ನು ಅನುಮೋದಿಸಿದ ಕೇಂದ್ರ ಜಲ ಆಯೋಗದ ತೀರ್ಮಾನವನ್ನು ಗೋವಾ ಸರ್ಕಾರ ಪ್ರಶ್ನಿಸಿದೆ. ಒಂದು ವೇಳೆ ಈ ಯೋಜನೆ ಅನುಷ್ಠಾನಗೊಂಡರೆ ಮಹದಾಯಿ ನದಿ ಬತ್ತಿ ಹೋಗಲಿದೆ ಹಾಗೂ ವನ್ಯಜೀವಿ ಧಾಮಕ್ಕೆ ಹಾನಿ ಆಗಲಿದೆ ಎಂದು ಗೋವಾ ದೂರಿದೆ. ಈ ಸಂಬಂಧ 122 ಪುಟಗಳ ದಾಖಲೆಯನ್ನು ಸುಪ್ರೀಂ ಕೋರ್ಟ್ಗೆ ಇದೇ 25ರಂದು ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಹದಾಯಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ತಕರಾರು ಅರ್ಜಿಯನ್ನು ತ್ವರಿತ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ. </p>.<p>ಮಹದಾಯಿ ಯೋಜನೆಯ ಕಾಮಗಾರಿಗೆ ಕೈಗೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಗೋವಾ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ. </p>.<p>ಗೋವಾ ಸರ್ಕಾರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವೆಂಕಟೇಶ ದೊಂಡ್, ‘ಗೋವಾದ ಮಹದಾಯಿ ವನ್ಯಜೀವಿ ಧಾಮದ ಪಕ್ಕದಲ್ಲಿನ ಜಲಮೂಲಗಳ ನೀರನ್ನು ಬಳಸಿಕೊಂಡು ಕಳಸಾ–ಬಂಡೂರಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಗೋವಾ ಸರ್ಕಾರದ ತಕರಾರು ಇದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿಯವರು ಟ್ವೀಟ್ ಸಹ ಮಾಡಿದ್ದಾರೆ’ ಎಂದರು. </p>.<p>ಆಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ‘ಫೆಬ್ರುವರಿ 13ರಂದು ಅರ್ಜಿಯ ವಿಚಾರಣೆ ನಡೆಸಲು ಈಗಾಗಲೇ ಪಟ್ಟಿ ಮಾಡಲಾಗಿದೆ. ನಾನು ಈ ಅರ್ಜಿಯ ವಿಚಾರಣೆ ನಡೆಸಲು ಆಗುವುದಿಲ್ಲ. ಬೇರೊಂದು ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ’ ಎಂದರು. </p>.<p>ಆಗ ಗೋವಾ ಪರ ವಕೀಲರು, ‘ನದಿ ನೀರು ತಿರುವು ಕಾಮಗಾರಿಗೆ ಫೆಬ್ರುವರಿ 13ರೊಳಗೆ ಚಾಲನೆ ಸಿಗಲಿದೆ. ಕರ್ನಾಟಕ ಮುಖ್ಯಮಂತ್ರಿಯವರು ಈ ಕುರಿತು ಹೇಳಿಕೆ ನೀಡಿದ್ದಾರೆ’ ಎಂದು ಪೀಠದ ಗಮನ ಸೆಳೆದರು. </p>.<p>ನಂತರ ನ್ಯಾಯಪೀಠ, ಫೆಬ್ರುವರಿ 13ರೊಳಗೆ ಅರ್ಜಿಯ ವಿಚಾರಣೆಯನ್ನು ಪಟ್ಟಿ ಮಾಡಲು ಸಮ್ಮತಿಸಿತು. </p>.<p>ಮಹದಾಯಿ ಯೋಜನೆಯ ಪರಿಷ್ಜೃತ ಡಿಪಿಆರ್ ಅನ್ನು ಅನುಮೋದಿಸಿದ ಕೇಂದ್ರ ಜಲ ಆಯೋಗದ ತೀರ್ಮಾನವನ್ನು ಗೋವಾ ಸರ್ಕಾರ ಪ್ರಶ್ನಿಸಿದೆ. ಒಂದು ವೇಳೆ ಈ ಯೋಜನೆ ಅನುಷ್ಠಾನಗೊಂಡರೆ ಮಹದಾಯಿ ನದಿ ಬತ್ತಿ ಹೋಗಲಿದೆ ಹಾಗೂ ವನ್ಯಜೀವಿ ಧಾಮಕ್ಕೆ ಹಾನಿ ಆಗಲಿದೆ ಎಂದು ಗೋವಾ ದೂರಿದೆ. ಈ ಸಂಬಂಧ 122 ಪುಟಗಳ ದಾಖಲೆಯನ್ನು ಸುಪ್ರೀಂ ಕೋರ್ಟ್ಗೆ ಇದೇ 25ರಂದು ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>