ಗೋವಾ ಸರ್ಕಾರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವೆಂಕಟೇಶ ದೊಂಡ್, ‘ಗೋವಾದ ಮಹದಾಯಿ ವನ್ಯಜೀವಿ ಧಾಮದ ಪಕ್ಕದಲ್ಲಿನ ಜಲಮೂಲಗಳ ನೀರನ್ನು ಬಳಸಿಕೊಂಡು ಕಳಸಾ–ಬಂಡೂರಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಗೋವಾ ಸರ್ಕಾರದ ತಕರಾರು ಇದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿಯವರು ಟ್ವೀಟ್ ಸಹ ಮಾಡಿದ್ದಾರೆ’ ಎಂದರು.