‘ಅನ್ಯ ಭಾಷಿಕರು ಗಡಿಭಾಗದಲ್ಲಿ ಇಂತಹ ಕೃತ್ಯ ಎಸಗುವುದನ್ನು ತಡೆಯಲು ಸ್ಥಳೀಯ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ, ಸ್ಥಳೀಯ ಪೊಲೀಸ್ ಇಲಾಖೆ ಎಚ್ಚರದಿಂದ ಇರಬೇಕು. ಮಹಾರಾಷ್ಟ್ರ ಸರ್ಕಾರ ನಮ್ಮ ನೆಲದಲ್ಲಿ ಬಂದು, ನಾಮಫಲಕ ಹಾಕುವವರೆಗೆ ನಮ್ಮ ಅಧಿಕಾರಿಗಳು ಮೌನವಹಿಸಿದ್ದು ಸರಿಯಲ್ಲ. ಇಂತಹ ಪರಿಸ್ಥಿತಿ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.