ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ದಟತನದ ಹೇಳಿಕೆಯನ್ನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೇ ಪ್ರತ್ಯುತ್ತರ ನೀಡಲು ನಾವೂ ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಪ್ರತ್ಯುತ್ತರ ಕೊಟ್ಟಿದ್ದಾರೆ.