ಕೊಲ್ಲಾಪುರ ಜಿಲ್ಲೆಯಲ್ಲಿ ಬಸ್ಸೊಂದು ಇನ್ನೇನು ಕೊಚ್ಚಿ ಹೋಗಲಿದೆ ಎನ್ನುವಷ್ಟರಲ್ಲಿ ಬಸ್ನಲ್ಲಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಗುರುವಾರ ರಾತ್ರಿಯೇ ಭೂಕುಸಿತ ಸಂಭವಿಸಿದ್ದರೂ ಭಾರಿ ಮಳೆ, ಪ್ರವಾಹ, ಕೆಸರಿನಿಂದಾಗಿ ರಕ್ಷಣಾ ಸಿಬ್ಬಂದಿಯು ಅವಘಡದ ಸ್ಥಳಕ್ಕೆ ತಲುಪುವುದು ತಡವಾಯಿತು ಎಂದು ರಾಯಗಡ ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದ್ದಾರೆ. ವಿವಿಧ ಸ್ಥಳಗಳಲ್ಲಿ ಹಲವು ಮನೆಗಳು ಕುಸಿದಿವೆ.