ನಗರದಲ್ಲಿ ಭಾನುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎನ್ಸಿಪಿ, ಕಾಂಗ್ರೆಸ್, ಶಿವಸೇನೆ ಮೂರು ಸೇರಿ ಯಾವಾಗ ಸರ್ಕಾರ ಸ್ಥಾಪಿಸಿದಿರೋ ಆಗಲೇ ಈ ಸರ್ಕಾರ ಬಹಳ ದಿನ ನಡೆಯಲ್ಲ ಎಂದು ನಾವು ತಿಳಿದುಕೊಂಡಿದ್ದೇವು. ತಮ್ಮ ತಮ್ಮಲ್ಲಿಯೇ ಗೊಂದಲ ಮೂಡಿದೆ. ಒಂದು ವಾಹನ ಸರಿಯಾಗಿ ಓಡಬೇಕೆಂದರೆ ಅದನ್ನು ಒಬ್ಬರೇ ಓಡಿಸಬೇಕು. ಒಬ್ಬರ ಕಡೆ ಸ್ಟೇರಿಂಗ್, ಒಬ್ಬರ ಕಡೆ ಎಕ್ಸಿಲೇಟರ್, ಒಬ್ಬರ ಕಡೆ ಬ್ರೇಕ್ ಇರುವಾಗ ಅದು ಸುಸೂತ್ರವಾಗಿ ಓಡುವುದಿಲ್ಲ ಎಂದರು.