ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಬಿಜೆಪಿ ಸೇಡಿನ ರಾಜಕೀಯವನ್ನು ಮುಂದುವರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇ.ಡಿ ಕರೆಸಿದೆ. ಆ ಮೂಲಕ ಸಂಸತ್ತಿನ ಅಧಿವೇಶನಕ್ಕೆ ಅಡ್ಡಿಪಡಿಸಲು ಸರ್ಕಾರ ಯತ್ನಿಸುತ್ತಿದೆ. ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ’ ಎಂದು ಟೀಕಿಸಿದ್ದಾರೆ.