ಶನಿವಾರ ನಡೆಯಲಿರುವಕಾಂಗ್ರೆಸ್ ಸಂಸದೀಯ ಪಕ್ಷದ ತಂತ್ರಗಾರಿಕೆ ಗುಂಪಿನ ಸಭೆಗೆ ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಹಾಗೂ ಕೆ.ಸಿ ವೇಣುಗೋಪಾಲ್ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದ ದಿಗ್ವಿಜಯ ಸಿಂಗ್ ಹಾಗೂ ಪಿ. ಚಿದಂಬರಂ ಅವರಿಗೆ ಅಹ್ವಾನ ನೀಡಿಲ್ಲಈ ಸಭೆಯಲ್ಲಿ ಖರ್ಗೆ ಅವರನ್ನೇ ಮುಂದುವರಿಸುವ ಬಗ್ಗೆ ಚರ್ಚೆಗಳು ನಡೆಯಲಿವೆಎಂದು ಮೂಲಗಳು ತಿಳಿಸಿವೆ.