‘ಪಿ.ಎಂ ಕೇರ್ಸ್ ಯೋಜನೆ ಅಡಿ ಎಷ್ಟು ಸಂದಾಯವಾಗಿದೆ ಎಂಬ ವಿವರವನ್ನು ಇದೂವರೆಗೂ ನೀಡಿಲ್ಲ. ಈ ಬಗ್ಗೆ ಸಂಸತ್ತಿನಲ್ಲೂ ಪ್ರಶ್ನಿಸಿದ್ದೇನೆ, ಕೆಲವರು ಆರ್ಟಿಐ ಮೂಲಕವೂ ಮಾಹಿತಿ ಕೋರಿದ್ದಾರೆ. ಆದರೆ, ಕೇಂದ್ರ ಸರ್ಕಾರ ಯಾವುದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ, ಈ ಯೋಜನೆಯು ಇದೆಲ್ಲದರ ಹೊರತಾಗಿದೆ ಎನ್ನುತ್ತಾರೆ. ಇವರಿಗೆ ಯಾವುದು ಬೇಕೋ ಅದು ಒಳಗೆ, ಯಾವುದು ಬೇಡವೋ ಅದು ಹೊರಗೆ ಎನ್ನುವ ಮನೋಭಾವ ಸರಿಯಲ್ಲ’ ಎಂದೂ ದೂರಿದರು.