<p><strong>ಬೆಂಗಳೂರು: </strong>‘ಶಾಂತಿದೂತ ಮಹಾತ್ಮ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದರು. ಈ ಹತ್ಯೆಯ ಮೂಲಕ ಗಾಂಧಿ ತತ್ವಗಳನ್ನು ಅಡಗಿಸುವ ತಂತ್ರವಿತ್ತು. ಆದರೆ, ಅದು ಫಲ ನೀಡಲಿಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಹೇಳಿದರು.</p>.<p>ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿಯವರು ಹಿಟ್ಲರ್ ರಕ್ತದವರು. ಬಿಜೆಪಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಕೂಡ ಇಡುತ್ತಿರಲಿಲ್ಲ. ಗಾಂಧಿ ತತ್ವಕ್ಕೇ ವಿರುದ್ಧವಾಗಿ ನಡೆಯವವರು ಅವರ ಆಶಯದಂತೆ ದೇಶ ಕಟ್ಟುತ್ತಾರಾ? ಕೇವಲ ಮತ ಗಳಿಕೆಗಾಗಿ ಈ ರೀತಿ ಮಾತನಾಡುತ್ತಾರೆ’ ಎಂದು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗಾಂಧೀಜಿಯ ಕೊಲೆ ಮಾಡಿದವರನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.</p>.<p>‘ಗಾಂಧೀಜಿ ಯಾರನ್ನು ಶತ್ರುಗಳೆಂದು ತಿಳಿದು, ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶ ಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥೂರಾಮ್ ಗೋಡ್ಸೆ ಎಂಬ ದೇಶದ್ರೋಹಿ ಹತ್ಯೆ ಮಾಡಿದ್ದ ಎಂಬುದನ್ನು ಮರೆಯಬಾರದು’ ಎಂದರು.</p>.<p>‘ಕಾಂಗ್ರೆಸ್ ನಾಯಕರಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಗಾಂಧೀಜಿ ಅಂತರಂಗದಲ್ಲಿ ಒಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚಸೂತ್ರಗಳಂತೆ ಬದುಕಿದ ಅವರು ಮಹಾನ್ ಸಮಾಜ ಪರಿವರ್ತಕ’ ಎಂದು ಬಣ್ಣಿಸಿದರು.</p>.<p>‘ಬಿಜೆಪಿಯು ಯುವಜನಾಂಗವನ್ನು ಬಳಸಿಕೊಂಡು ಸಮಾಜದಲ್ಲಿ ಶಾಂತಿ ಕದಡುತ್ತಿದೆ. ಯುವಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದೆ. ಯುವಜನರು ಗಾಂಧಿಯವರ ತತ್ವ ಮತ್ತು ಆದರ್ಶ ರೂಢಿಸಿಕೊಳ್ಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪಕ್ಷದ ಪ್ರಮುಖರಾದ ಟಿ.ಬಿ. ಜಯಚಂದ್ರ, ಎಚ್.ಆಂಜನೇಯ, ರಾಣಿ ಸತೀಶ್ ಹಾಗೂ ವಿ.ಎಸ್. ಉಗ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಶಾಂತಿದೂತ ಮಹಾತ್ಮ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದರು. ಈ ಹತ್ಯೆಯ ಮೂಲಕ ಗಾಂಧಿ ತತ್ವಗಳನ್ನು ಅಡಗಿಸುವ ತಂತ್ರವಿತ್ತು. ಆದರೆ, ಅದು ಫಲ ನೀಡಲಿಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಹೇಳಿದರು.</p>.<p>ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿಯವರು ಹಿಟ್ಲರ್ ರಕ್ತದವರು. ಬಿಜೆಪಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಕೂಡ ಇಡುತ್ತಿರಲಿಲ್ಲ. ಗಾಂಧಿ ತತ್ವಕ್ಕೇ ವಿರುದ್ಧವಾಗಿ ನಡೆಯವವರು ಅವರ ಆಶಯದಂತೆ ದೇಶ ಕಟ್ಟುತ್ತಾರಾ? ಕೇವಲ ಮತ ಗಳಿಕೆಗಾಗಿ ಈ ರೀತಿ ಮಾತನಾಡುತ್ತಾರೆ’ ಎಂದು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗಾಂಧೀಜಿಯ ಕೊಲೆ ಮಾಡಿದವರನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.</p>.<p>‘ಗಾಂಧೀಜಿ ಯಾರನ್ನು ಶತ್ರುಗಳೆಂದು ತಿಳಿದು, ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶ ಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥೂರಾಮ್ ಗೋಡ್ಸೆ ಎಂಬ ದೇಶದ್ರೋಹಿ ಹತ್ಯೆ ಮಾಡಿದ್ದ ಎಂಬುದನ್ನು ಮರೆಯಬಾರದು’ ಎಂದರು.</p>.<p>‘ಕಾಂಗ್ರೆಸ್ ನಾಯಕರಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಗಾಂಧೀಜಿ ಅಂತರಂಗದಲ್ಲಿ ಒಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚಸೂತ್ರಗಳಂತೆ ಬದುಕಿದ ಅವರು ಮಹಾನ್ ಸಮಾಜ ಪರಿವರ್ತಕ’ ಎಂದು ಬಣ್ಣಿಸಿದರು.</p>.<p>‘ಬಿಜೆಪಿಯು ಯುವಜನಾಂಗವನ್ನು ಬಳಸಿಕೊಂಡು ಸಮಾಜದಲ್ಲಿ ಶಾಂತಿ ಕದಡುತ್ತಿದೆ. ಯುವಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದೆ. ಯುವಜನರು ಗಾಂಧಿಯವರ ತತ್ವ ಮತ್ತು ಆದರ್ಶ ರೂಢಿಸಿಕೊಳ್ಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪಕ್ಷದ ಪ್ರಮುಖರಾದ ಟಿ.ಬಿ. ಜಯಚಂದ್ರ, ಎಚ್.ಆಂಜನೇಯ, ರಾಣಿ ಸತೀಶ್ ಹಾಗೂ ವಿ.ಎಸ್. ಉಗ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>