ಮುನಿನಂಜಯ್ಯ (65) ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಗ್ರಾಮದ ಹೊರವಲಯದಲ್ಲಿರುವ ಬಸವೇಶ್ವರ ದೇವಾಲಯಕ್ಕೆ ಅವರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ. ಹಿಂದೆ ಬರುತ್ತಿದ್ದ ಜನರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಆನೆ ದಾಳಿಯ ರಭಸಕ್ಕೆ ಮುನಿನಂಜಯ್ಯ ಪಕ್ಕದ ಕಾಲುವೆಯಲ್ಲಿ ಬಿದ್ದಿದ್ದಾರೆ. ಅವರ ಎರಡು ಕಾಲುಗಳೂ ಮುರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.