ಅಕ್ರಮ ಗಣಿಗಾರಿಕೆ ಪರಿಣಾಮ ಕುರಿತ ಪ್ರಜಾವಾಣಿ ವರದಿ ಉಲ್ಲೇಖಿಸಿ ಸುಮಲತಾ ಟ್ವೀಟ್

ಬೆಂಗಳೂರು: ಕೆಆರ್ಎಸ್ ಅಣೆಕಟ್ಟೆ ಸಮೀಪದಲ್ಲಿರುವ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ವರದಿಯನ್ನು ಉಲ್ಲೇಖಿಸಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಟ್ವೀಟ್ ಮಾಡಿದ್ದಾರೆ.
ಕೆಲವೇ ಜನರ ದುರಾಸೆಗೆ, ಸ್ವಾರ್ಥಕ್ಕೆ ನಮ್ಮ ಜನರ ಹಾಗೂ ಮಕ್ಕಳ ಭವಿಷ್ಯ ಬಲಿಯಾಗಲು ಬಿಡಬಾರದು ಎಂದು ಮನವಿ ಮಾಡಿದ್ದಾರೆ.
ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಇಂದಿನ @prajavani ಯಲ್ಲಿ ಮತ್ತೊಂದು ವರದಿ. ಕೆಲವೇ ಜನರ ದುರಾಸೆಗೆ, ಸ್ವಾರ್ಥಕ್ಕೆ ನಮ್ಮ ಜನರ, ಮಕ್ಕಳ ಭವಿಷ್ಯ ಬಲಿಯಾಗಲು ಬಿಡಬಾರದು. #SaveKRS #StopIllegalMining pic.twitter.com/Hxu52av1Hs
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 11, 2021
ಮತ್ತೊಂದು ಟ್ವೀಟ್ನಲ್ಲಿ, ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆʼ ಎನ್ನುವ ಮೂಲಕ ವಿರೋಧಿಗಳತ್ತ ಚಾಟಿ ಬೀಸಿದ್ದಾರೆ.
ಶುಭೋದಯ 🙏
ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ.
ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ. #SaveKRSDam#StopIllegalMining— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 11, 2021
ಗಣಿಗಾರಿಕೆ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕರ ನಡುವೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ.
ಇನ್ನಷ್ಟು ಸುದ್ದಿಗಳು
* ಮಂಡ್ಯ: ‘ನಿಶ್ಶಬ್ದ ಸ್ಫೋಟ’ದಿಂದ ಅಂತರ್ಜಲ ಕಲುಷಿತ
* ಅಕ್ರಮ ಗಣಿಗಾರಿಕೆ: ಸತ್ಯದ ಪರ ನಿಂತಾಗ ಶತ್ರುಗಳು ಹೆಚ್ಚು – ಸುಮಲತಾ ಟ್ವೀಟ್
* ‘ಸುಮಲತಾ ಮಾಟಗಾತಿಯಾ?’: ಶಾಸಕ ರವೀಂದ್ರ ಶ್ರೀಕಂಠಯ್ಯ
* ಡ್ಯಾಂ ಬಿರುಕಿನ ಚರ್ಚೆ: ಸುಳ್ಳುಸುದ್ದಿ ಸೃಷ್ಟಿಸಿದ ಗೊಂದಲ
* ಮಂಡ್ಯ: ಕೈಕುಳಿಯಿಂದ ಮೆಗ್ಗರ್ ಸ್ಫೋಟದವರೆಗೆ ಬೇಬಿಬೆಟ್ಟ!
* ಕನ್ನಂಬಾಡಿ ಬಿರುಕು ವಿಚಾರ; ಸಿಎಂ ಸ್ಪಷ್ಟಪಡಿಸಲಿ–ಎಚ್.ವಿಶ್ವನಾಥ್
* ಕುಮಾರಸ್ವಾಮಿ ವಿರುದ್ಧದ ಟೀಕೆ: ರಾಕ್ಲೈನ್ ವೆಂಕಟೇಶ್ ಮನೆಗೆ ಮುತ್ತಿಗೆ
* ನೀವು ಶಾಸಕರೋ, ಭಯೋತ್ಪಾದಕರೋ: ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಆಕ್ರೋಶ
* ಬೇಬಿಬೆಟ್ಟ: ನಿತ್ಯ 1,200 ಟ್ರಕ್ ಜಲ್ಲಿ ರವಾನೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.