ಪೊಲೀಸ್ ಭದ್ರತೆ ನಡುವೆ ಅಂತ್ಯಕ್ರಿಯೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಸೇರಿ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಯ ನಡುವೆ ಶುಕ್ರವಾರ ಕಲ್ಲಹಳ್ಳಿ ಸ್ಮಶಾನದಲ್ಲಿ ದರ್ಶನ್ ಅಂತ್ಯಕ್ರಿಯೆ ನೆರವೇರಿತು. ಕಲ್ಲಹಳ್ಳಿಯ ವಿವಿಧೆಡೆ ದರ್ಶನ್ ಸಾವಿಗೆ ಶ್ರದ್ಧಾಂಜಲಿ ಕೋರಿ ಬೃಹತ್ ಕಟೌಟ್ ಹಾಕಲಾಗಿದೆ. ಈಗಲೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ಬಿಗಿ ಭದ್ರತೆ ಮುಂದುವರಿಸಲಾಗಿದೆ.